ಸುಂಟಿಕೊಪ್ಪ, ಜೂ. 8: ಸುಂಟಿಕೊಪ್ಪ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸಿ ಸುಲಿಗೆ ಮಾಡಿದ್ದ ನಗದು ಹಣವನ್ನು ವಶಕ್ಕೆ ಪಡೆದ ಪೆÇಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳ ಕಾರ್ಯವನ್ನು ಮೆಚ್ಚಿ ಗುಂಡುಗುಟ್ಟಿ ಹಾಗೂ ಹರದೂರು ಎಸ್ಟೇಟ್‍ನ ಮಾಲೀಕರಾದ ನಿವೃತ್ತ ಲೆಫ್ಟಿನೆಂಟ್ ಕರ್ನಲ್ ಬಿ.ಜಿ.ವಿ. ಕುಮಾರ್ ಹಾಗೂ ಮುಕುಲ್ ಮಹೇಂದ್ರ ಅವರು ಇಂದು ಪೆÇಲೀಸ್ ಕಚೇರಿಗೆ ಭೇಟಿ ನೀಡಿ ಪೆÇಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗೆ ನಗದು ಬಹುಮಾನವನ್ನು ನೀಡಿದರು.

ಕೊಡಗು ಜಿಲ್ಲಾ ಪೆÇಲೀಸ್ ಅಧೀಕ್ಷಕಿ ಡಾ. ಸುಮನ್, ಸೋಮವಾರಪೇಟೆ ಉಪವಿಭಾಗದ ಉಪಾಧೀಕ್ಷಕ ಹೆಚ್.ಎಂ. ಶೈಲೇಂದ್ರ, ಕುಶಾಲನಗರದ ವೃತ್ತ ನಿರೀಕ್ಷಕ ಎಂ. ಮಹೇಶ್ ಹಾಗೂ ಮಡಿಕೇರಿ ಗ್ರಾಮಾಂತರ ಪೆÇಲೀಸ್ ಠಾಣಾ ಉಪನಿರೀಕ್ಷಕ ಚಂದ್ರಶೇಖರ್ ಹಾಜರಿದ್ದರು.