ಮಡಿಕೇರಿ, ಜೂ. 10: ಕೊಡಗಿನಲ್ಲಿ ಕಳೆದ ಸಾಲಿನಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪದಿಂದ ಆಸ್ತಿ ಪಾಸ್ತಿಗಳನ್ನು ಕಳೆದುಕೊಂಡು ನಿರಾಶ್ರಿತರಾಗಿರುವ ಕುಟುಂಬಗಳಿಗೆ ಮತ್ತು ನೆಲೆ ಇಲ್ಲದ ಮಂದಿಗೆ ಸೂರು ಒದಗಿಸುವಂತೆ ಒತ್ತಾಯಿಸಿ ವಿಕೋಪಕ್ಕೆ ತುತ್ತಾದ ಪ್ರದೇಶಗಳಲ್ಲಿ ‘ಪಾದಯಾತ್ರೆ’ ಹಮ್ಮಿಕೊಳ್ಳಲಾಗುವುದೆಂದು ಕೊಡಗು ಜಿಲ್ಲಾ ಜಾತ್ಯತೀತ ಜನತಾದಳ ತಿಳಿಸಿದೆ. ದಿನಾಂಕವನ್ನು ನಿಗದಿಪಡಿಸಿಲ್ಲ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಜೆಡಿಎಸ್ ಅಧ್ಯಕ್ಷÀ ಕೆ.ಎಂ.ಗಣೇಶ್ ಅವರು 2019 ರಲ್ಲಿ ಸಂಭವಿಸಿದ ಅತಿವೃಷ್ಟಿ ಹಾನಿಯಿಂದ ಜಿಲ್ಲೆಯ ಕೊಂಡಂಗೇರಿ, ನೆಲ್ಲಿಹುದಿಕೆÉೀರಿ, ಕರಡಿಗೋಡು, ಕುಶಾಲನಗರ, ತೋರ ಮುಂತಾದ ಪ್ರದೇಶಗಳಲ್ಲಿ ಸುಮಾರು 650 ಕ್ಕೂ ಹೆಚ್ಚಿನ ಕುಟುಂಬಗಳು ನೆಲೆ ಕಳೆÉದುಕೊಂಡಿದ್ದು, ಈ ಕುಟುಂಬಗಳಿಗೆ ಸೂರು ಒದಗಿಸುವಲ್ಲಿ ಸರ್ಕಾರ ಹಾಗೂ ಜಿಲ್ಲಾಡಳಿತ ವಿಫಲವಾಗಿದೆ ಎಂದು ಆರೋಪಿಸಿದರು.ಹಿಂದಿನ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಪ್ರಯತ್ನದಿಂದ 2018ರ ನಿರಾಶ್ರಿತರಿಗೆ ಸುಮಾರು 10 ಲಕ್ಷ ರೂ. ವೆಚ್ಚದ ಮನೆಗಳನ್ನು ನಿರ್ಮಿಸಲಾಗಿದ್ದು, ಇವುಗಳನ್ನು ಉದ್ಘಾಟಿಸಿದ ಈಗಿನ ಸರ್ಕಾರ ಅದನ್ನೇ ತಮ್ಮ ಸಾಧನೆಯೆಂದು ಬಿಂಬಿಸಿಕೊಳ್ಳುತ್ತಿದೆ ಎಂದು ಟೀಕಿಸಿದರು.
ಸಿದ್ದಾಪುರ, ಕರಡಿಗೋಡು ಭಾಗದಲ್ಲಿ ಸಾಕಷ್ಟು ಸರ್ಕಾರಿ ಜಮೀನು ಲಭ್ಯವಿದ್ದರೂ ಅದನ್ನು ವಿತರಿಸದೆ, ಸಂತ್ರಸ್ತರನ್ನು ಬೇರೆಡೆಗೆ ಸ್ಥಳಾಂತರಿಸಲು ಹುನ್ನಾರ ನಡೆದಿದೆ ಎಂದರು.
ಜೆಡಿಎಸ್ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಇಸಾಕ್ ಖಾನ್ ಮಾತನಾಡಿದರು.
ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ರಾಜ್ಯ ಸಂಘಟನಾ ಕಾರ್ಯದರ್ಶಿ ಮನ್ಸೂರ್ ಆಲಿ, ಜಿಲ್ಲಾ ಉಪಾಧ್ಯಕ್ಷ ಶಿವದಾಸ್, ಮಡಿಕೇರಿ ತಾಲ್ಲೂಕು ಅಧ್ಯಕ್ಷ ಗೌತಮ್ ಹಾಗೂ ವೀರಾಜಪೇಟೆ ತಾಲೂಕು ಮಹಿಳಾ ಘಟಕದ ಅಧ್ಯಕ್ಷೆ ಎಂ.ಎ.ಯಮುನಾ ಉಪಸ್ಥಿತರಿದ್ದರು.
ಪ್ರಾಕೃತಿಕ ವಿಕೋಪದ ಸಂತ್ರಸ್ತರಿಗೆ ಮನೆಗಳನ್ನು ವಿತರಿಸುವ ಸಂದರ್ಭ ಅರ್ಹರಲ್ಲದ ನಗರದ ಕೆಲವು ಮಂದಿ ಮನೆಗಳನ್ನು ಪಡೆದುಕೊಂಡಿದ್ದಾರೆ ಎಂದು ಗಂಭೀರ ಆರೋಪ ಮಾಡಿರುವ ಜಾತ್ಯತೀತ ಜನತಾದಳದ ಮಹಿಳಾ ಘಟಕ, ಈ ಕುರಿತು ಜಿಲ್ಲಾಡಳಿತ ಸೂಕ್ತ ತನಿಖೆಯೊಂದಿಗೆ ಪುನರ್ ಸಮೀಕ್ಷೆ ನಡೆಸಬೇಕೆಂದು ಆಗ್ರಹಿಸಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಲೀಲಾ ಶೇಷಮ್ಮ ಮಾತನಾಡಿ, ನಗರ ವ್ಯಾಪ್ತಿಯ ಚಾಮುಂಡೇಶ್ವರಿ ನಗರ, ಇಂದಿರಾ ನಗರ ಬಡಾವಣೆಯ ಹಲವು ಕುಟುಂಬಗಳು ಕಳೆದ ಎರಡು ವರ್ಷಗಳ ಪ್ರಾಕೃತಿಕ ವಿಕೋಪದಲ್ಲಿ ಮನೆಗಳನ್ನು ಕಳೆದುಕೊಂಡಿದ್ದಾರೆ.
(ಮೊದಲ ಪುಟದಿಂದ) ಇವರಲ್ಲಿ ಸಾಕಷ್ಟು ಮಂದಿಗೆ ಇತ್ತೀಚೆಗೆ ಜಂಬೂರು ವಿಭಾಗದಲ್ಲಿ ಮನೆಗಳನ್ನು ಒದಗಿಸಲಾಗಿದೆಯೆಂದು ತಿಳಿಸಿದರು.
ರಸ್ತೆ ಅವ್ಯವಸ್ಥೆ: ಮಡಿಕೇರಿ ನಗರದ ಬಹುತೇಕ ರಸ್ತೆಗಳು ಹೊಂಡ ಗುಂಡಿಗಳಿಂದ ಕೂಡಿದ್ದು, ಮುಂಗಾರು ಆರಂಭವಾಗಿದ್ದರು ನಗರಸಭೆÉ ಗುಂಡಿ ಮುಚ್ಚುವ ಕೆಲಸವನ್ನು ಮಾಡಿಲ್ಲ. ಜೊತೆಗೆ ಚರಂಡಿ, ರಸ್ತೆ ಬದಿಯ ಕುರುಚಲು ಕಾಡುಗಳನ್ನು ತೆರವುಗೊಳಿಸುವ ಕಾರ್ಯವನ್ನು ಸಮರ್ಪಕವಾಗಿ ನಿರ್ವಹಿಸಿಲ್ಲ. ಇದರಿಂದಾಗಿ ವಾಹನಗಳು ಮಾತ್ರವಲ್ಲದೆ ಪಾದಚಾರಿಗಳು ಕೂಡ ರಸ್ತೆಯಲ್ಲಿ ನಡೆದಾಡಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ಮಹಿಳಾ ಘಟಕದ ನಗರಾಧ್ಯಕ್ಷೆ ಸುನಂದಾ, ಪ್ರಧಾನ ಕಾರ್ಯದರ್ಶಿ ಜೆಸಿಂತಾ ಶ್ರೀಧÀರ್, ಪದಾಧಿಕಾರಿ ಎನ್.ಸಿ. ಮಮತ ಹಾಗೂ ವೀರಾಜಪೇಟೆ ತಾಲೂಕು ಅಧ್ಯಕ್ಷೆ ಎಂ.ಎ. ಯಮುನಾ ಉಪಸ್ಥಿತರಿದ್ದರು.