ಮಡಿಕೇರಿ, ಜೂ. 14: ಕೋವಿಡ್-19 ರ ಲಾಕ್‍ಡೌನ್ ಸಂಬಂಧ ಸಂಕಷ್ಟಕ್ಕೊಳಗಾದ ಅಗಸ ಮತ್ತು ಸವಿತಾ ಸಮಾಜದ ಕಾರ್ಮಿಕರಿಗೆ ಕರ್ನಾಟಕ ರಾಜ್ಯ ಸರ್ಕಾರವು ರೂ. 5000 ಪರಿಹಾರ ಧನವನ್ನು ಘೋಷಿಸಿದ್ದು, ಈ ಪರಿಹಾರವನ್ನು ಪಡೆಯಲು ಅರ್ಹ ವೃತ್ತಿದಾರರು ಸೇವಾ ಸಿಂಧು ಪೆÇೀರ್ಟಲ್ hಣಣಠಿs://sevಚಿsiಟಿಜhu.ಞಚಿಡಿಟಿಚಿಣಚಿಞಚಿ.gov.iಟಿ ಮೂಲಕ ಅರ್ಜಿ ಸಲ್ಲಿಸಲು ಕೋರಲಾಗಿದೆ.

ಅರ್ಜಿ ಸಲ್ಲಿಸುವಾಗ ಆಧಾರ್ ಕಾರ್ಡ್, ವಿಳಾಸ ದೃಢೀಕರಣ ಪತ್ರ (ಚುನಾವಣಾ ಗುರುತಿನ ಚೀಟಿ/ಚಾಲನಾ ಪರವಾನಗಿ/ಪಡಿತರ ಚೀಟಿ), ಐ.ಎಫ್.ಎಸ್. ಕೋಡ್ ಮತ್ತು ಖಾತೆ ಸಂಖ್ಯೆ ಸ್ಪಷ್ಟವಾಗಿ ಕಾಣುವಂತೆ ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ, ಸ್ವಯಂ ಘೋಷಣೆ ಪತ್ರದೊಂದಿಗೆ (ಈ ಪತ್ರದಲ್ಲಿ ಮೊಬೈಲ್ ನಂಬರನ್ನು ಕಡ್ಡಾಯವಾಗಿ ನಮೂದಿಸುವುದು) ವೃತ್ತಿ ನಿರ್ವಹಿಸುತ್ತಿರುವ ಬಗ್ಗೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ/ ಕಂದಾಯ ಅಧಿಕಾರಿ/ಕಂದಾಯ ನಿರೀಕ್ಷಕರುಗಳಿಂದ ಹಾಗೂ ತಾಲೂಕು ಮಟ್ಟದಲ್ಲಿ ಕಂದಾಯ ಇಲಾಖೆಯ ತಹಶೀಲ್ದಾರ್ / ಉಪ ತಹಶೀಲ್ದಾರ್ / ಕಂದಾಯ ಪರಿವೀಕ್ಷಕರು /ನಗರ ಸಭೆ ಪಟ್ಟಣ ಪಂಚಾಯಿತಿಯ ಅಧಿಕಾರಿಗಳು/ ಕಾರ್ಮಿಕ ನಿರೀಕ್ಷಕರು ಮತ್ತು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಂದ ಪಡೆದ ಉದ್ಯೋಗ ಪ್ರಮಾಣ ಪತ್ರ ಪಡೆದಿರಬೇಕು.

ಹೆಚ್ಚಿನ ಮಾಹಿತಿಗೆ ಸಂಬಂಧಪಟ್ಟ ಗ್ರಾಮ ಪಂಚಾಯಿತಿ/ಪಟ್ಟಣ ಪಂಚಾಯಿತಿ / ತಾಲೂಕು ಕಚೇರಿ / ಕಾರ್ಮಿಕ ನಿರೀಕ್ಷಕರುಗಳ ಕಚೇರಿಯನ್ನು ಸಂಪರ್ಕಿಸುವುದು. ಅರ್ಜಿ ಸಲ್ಲಿಸಲಾದ ಅರ್ಹರಿಗೆ ರೂ. 5000 ಪರಿಹಾರ ಧನವನ್ನು ಅರ್ಹ ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಸರ್ಕಾರದ ವತಿಯಿಂದ ಜಮೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.