ಮಡಿಕೇರಿ, ಜೂ.21 : ಕುಶಾಲನಗರ ನಗರ ಕಾಂಗ್ರೆಸ್ ಘಟಕಕ್ಕೆ ನೂತನ ಅಧ್ಯಕ್ಷರನ್ನಾಗಿ ಶರೀಫ್ ಇಬ್ರಾಹಿಂ, ಉಪಾಧ್ಯಕ್ಷರಾಗಿ ಪ್ರಾರ್ಥನ್ ಚಿಟ್ಟಿಯಪ್ಪ ಹಾಗೂ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರನ್ನಾಗಿ ಅಜರುದ್ದೀನ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಎಸ್.ಅನಂತ್ ಕುಮಾರ್ ತಿಳಿಸಿದ್ದಾರೆ. ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪದಗ್ರಹಣ ಕಾರ್ಯಕ್ರಮದ ಪೂರ್ವಸಿದ್ಧತಾ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಬ್ಲಾಕ್ ಅಧ್ಯಕ್ಷರು ಘೋಷಿಸಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಕೆ. ಮಂಜುನಾಥ್ ಕುಮಾರ್, ಐಎನ್ಟಿಯುಸಿ ರಾಜ್ಯ ಉಪಾಧ್ಯಕ್ಷ ನಾಪಂಡ ಮುತ್ತಪ್ಪ, ಕೆಪಿಸಿಸಿ ಸಂಯೋಜಕ ಹಾಗೂ ಕುಶಾಲನಗರ ಬ್ಲಾಕ್ ಉಸ್ತುವಾರಿ ಪ್ರದೀಪ್ ರೈ, ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಉಸ್ತುವಾರಿ ಎಡ್ವಿನ್, ಕಾರ್ಮಿಕ ಘಟಕದ ರಾಜ್ಯ ಕಾರ್ಯದರ್ಶಿ ರವಿ ಅಜ್ಜಳ್ಳಿ, ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಉಸ್ಮಾನ್, ಜಿಲ್ಲಾ ಕಾಂಗ್ರೆಸ್ ವಕ್ತಾರ ಟಿ.ಈ.ಸುರೇಶ, ಯುವ ಪ್ರಧಾನ ಕಾರ್ಯದರ್ಶಿ ಕೆ.ಎನ್.ಹೂವಯ್ಯ, ಪರಿಶಿಷ್ಟ ಜಾತಿ ಘಟಕದ ಉಪಾಧ್ಯಕ್ಷ ಜನಾರ್ಧನ್, ಕುಶಾಲನಗರ ಬ್ಲಾಕ್ ಯುವ ಅಧ್ಯಕ್ಷ ದೇವಪ್ಪ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಯುವ ಉಪಾಧ್ಯಕ್ಷ ಮೈಸಿ ಕತ್ತಣಿರಾ, ಪ್ರಮುಖರಾದ ತೀರ್ಥ, ಗ್ರಾ.ಪಂ ಮಾಜಿ ಅಧ್ಯಕ್ಷ ವಿ.ಜೆ.ಹರೀಶ್ ಗೋಪಾಲ್, ಕಾರ್ಯಕರ್ತರು ಸಭೆಯಲ್ಲಿ ಹಾಜರಿದ್ದರು. ಇದೇ ಸಂದರ್ಭ ನೂತನ ಪದಾಧಿಕಾರಿಗಳಿಗೆ ಕಾಂಗ್ರೆಸ್ ಧ್ವಜವನ್ನು ನೀಡಿ ಅಧಿಕಾರವನ್ನು ಹಸ್ತಾಂತರಿಸಲಾಯಿತು.