ಸಂಪಾಜೆ, ಜೂ. 26: ಸಂಪಾಜೆ ಗ್ರಾ.ಪಂ. ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಾಸಕ ಕೆ.ಜಿ. ಬೋಪಯ್ಯ ಅವರು ಚಾಲನೆ ನೀಡಿದರು. ಕೊಯನಾಡು ಶಾಲಾ ನೂತನ ಕಟ್ಟಡ, ಕೊಯನಾಡು ಗುಡ್ಡೆಗದ್ದೆ ಕಾಂಕ್ರೀಟ್ ರಸ್ತೆ,ಕುಂಠಿಕಾನ ಕೂಟೇಲು ಕಾಂಕ್ರೀಟ್ ರಸ್ತೆ, ಬೈಲು ಅಂಗನವಾಡಿಯ ನೂತನ ಕಟ್ಟಡಕ್ಕೆ ಗುದ್ದಲಿ ಪೂಜೆ, ಗ್ರಾಮ ಪಂಚಾಯತ್ ಸಭಾಭವನ ಉದ್ಘಾಟನೆ ಹಾಗೂ ಸಭಾ ಕಾರ್ಯಕ್ರಮವು ನಡೆಯಿತು.
ಅಧ್ಯಕ್ಷತೆಯನ್ನು ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಕುಮಾರ್ ಚೆದ್ಕಾರ್ ವಹಿಸಿದರು, ತಾಲೂಕು ಪಂಚಾಯತ್ ಸದಸ್ಯ ನಾಗೇಶ್ ಕುಂದಲ್ಪಾಡಿ, ಪಯಸ್ವಿನಿ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಅನಂತ ಎನ್.ಸಿ, ಪಂಚಾಯತ್ ಉಪಾಧ್ಯಕ್ಷ ಸುಂದರ ಬಿಸಿಲುಮನೆ, ಕೃಷಿ ಉತ್ಪನ್ನ ಮಾರುಕಟ್ಟೆಯ ಸದಸ್ಯ ದೇವಪ್ಪ ಕೊಯನಾಡು, ಕೃಷಿ ಉತ್ಪನ್ನ ಮಾರುಕಟ್ಟೆಯ ಮಾಜಿ ಅಧ್ಯಕ್ಷ ಸುಬ್ರಹ್ಮಣ್ಯ ಉಪಾಧ್ಯಾಯ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶೋಭಾರಾಣಿ, ಸದಸ್ಯರಾದ ರಮಾದೇವಿ ಬಾಲಚಂದ್ರ ಕಳಗಿ, ಸಂಪಾಜೆ ಪಂಚಾಯತ್ ಚುನಾಯಿತ ಪ್ರತಿನಿಧಿಗಳು, ರೈತ ಹಿತರಕ್ಷಣಾ ವೇದಿಕೆ ಸದಸ್ಯರುಗಳು, ಪಂಚಾಯತ್ ಸಿಬ್ಬಂದಿ ವರ್ಗದವರು, ಆರಕ್ಷಕ ಠಾಣಾ ಸಿಬ್ಬಂದಿಗಳು, ಕೃಷಿ ಪತ್ತಿನ ಸಹಕಾರಿ ಸಂಘದ ಚುನಾಯಿತ ಪ್ರತಿನಿಧಿಗಳು, ಪಂಚಾಯತ್ ಮಾಜಿ ಸದಸ್ಯರುಗಳು, ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರುಗಳು ಹಾಗೂ ಸಮಸ್ತ ಗ್ರಾಮಸ್ಥರು ಭಾಗವಹಿಸಿದ್ದರು..
ಸಮಾರೋಪ ಸಮಾರಂಭದಲ್ಲಿ ದೇಶಕ್ಕೆ ಮಾರಕವಾದ ಕೊರೊನಾ ವೈರಸ್ ಜಾಗೃತಿ ಸಂದರ್ಭದಲ್ಲಿ ಕರ್ತವ್ಯ ನಿರ್ವಹಿಸಿದ ಆರಕ್ಷಕ ಠಾಣಾ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರಿಗೆ, ಅಂಗನವಾಡಿ ಕಾರ್ಯಕರ್ತೆಯರು ಸ್ಮರಣಿಕೆ ನೀಡಿ ಗೌರವಿಸಲಾಯಿತು ಹಾಗೂ ಆಡಳಿತ ಮಂಡಳಿ ಸದಸ್ಯರಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು.
ರಾಜ್ಯಕ್ಕೆ ಮಾದರಿಯಾಗಿ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳನ್ನು ಪೂರೈಸಿ ರಾಷ್ಟ್ರೀಯ ಮಟ್ಟದಲ್ಲಿ ಸಶಸ್ತ್ರಿಕರಣ ರಾಷ್ಟ್ರಪ್ರಶಸ್ತಿ ಪಡೆದು ಹೆಗ್ಗಳಿಕೆ ಮೆರೆದ ಗ್ರಾಮ ಕೊಡಗು-ಸಂಪಾಜೆ ಗ್ರಾಮ ಪಂಚಾಯತ್, ರಾಷ್ಟ್ರಪ್ರಶಸ್ತಿ ಪಡೆದು ಹಲವು ವರುಷಗಳಿಂದ ಗ್ರಾಮದ ಅಭಿವೃದ್ಧಿಗೆ ಶ್ರಮಿಸಿ ಪ್ರಶಸ್ತಿ ಪಡೆಯುವಲ್ಲಿ ಯಶಸ್ವಿಯಾದ ಸಂಪಾಜೆ ಬಿ.ಜೆ.ಪಿ. ನಾಯಕ, ಕೊಡಗು ಜಿಲ್ಲಾ ಬಿ.ಜೆ.ಪಿ ಪ್ರಧಾನ ಕಾರ್ಯದರ್ಶಿಯಾಗಿದ್ದ ದಿ. ಬಾಲಚಂದ್ರ ಕಳಗಿ ಅವರನ್ನು ಈ ಸಂದರ್ಭ ಸ್ಮರಿಸಲಾಯಿತು.
ಕಾರ್ಯಕ್ರಮದ ಅಭಿನಂದನಾ ಭಾಷಣವನ್ನು ಕುಮಾರ್ ಚೆದ್ಕಾರ್, ಧನ್ಯವಾದ ಸಮರ್ಪಣೆಯನ್ನು ಶ್ರೀಮತಿ ಶೋಭಾರಾಣಿ ನೆರವೇರಿಸಿದರು ಹಾಗೂ ಪುರುಷೋತ್ತಮ ಬಾಳೆಹಿತ್ಲು ಕಾರ್ಯಕ್ರಮವನ್ನು ನಿರೂಪಿಸಿದರು.