ಮಡಿಕೇರಿ, ಜು. 2: ಕೊರೊನಾ ವಾರಿಯರ್ಸ್‍ಗಳಾಗಿ ದುಡಿಯುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಸಹಕಾರ ಇಲಾಖೆ ವತಿಯಿಂದ ತಲಾ 3 ಸಾವಿರ ರೂಪಾಯಿ ಪ್ರೋತ್ಸಾಹಧನ ನೀಡಲಾಗುತ್ತಿದೆ. ಇದರೊಂದಿಗೆ ಆಶಾ ಕಾರ್ಯಕರ್ತೆಯರಿಗೆ ಸ್ವಸಹಾಯ ಹಾಗೂ ಸ್ತ್ರೀಶಕ್ತಿ ಸಂಘಗಳ ಮಾದರಿಯಲ್ಲಿ ಸಹಕಾರ ಇಲಾಖೆಯಿಂದ ಸಾಲಸೌಲಭ್ಯ ಒದಗಿಸುವ ಮೂಲಕ ಅವರುಗಳಿಗೂ ಹಣಕಾಸಿನ ಭದ್ರತೆ ನೀಡಲು ಚಿಂತನೆ ನಡೆಸಲಾಗಿದೆ, ಸರಕಾರದ ಮಟ್ಟದಲ್ಲಿ ಈ ಸಂಬಂಧ ಸಭೆಗಳೂ ನಡೆದಿದ್ದು, ಆದಷ್ಟು ಶೀಘ್ರವಾಗಿ ನಿರ್ಧಾರವನ್ನು ಪ್ರಕಟಿಸಲಾಗುವುದು ಎಂದು ಸಹಕಾರ ಮಡಿಕೇರಿ, ಜು. 2: ಕೊರೊನಾ ವಾರಿಯರ್ಸ್‍ಗಳಾಗಿ ದುಡಿಯುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಸಹಕಾರ ಇಲಾಖೆ ವತಿಯಿಂದ ತಲಾ 3 ಸಾವಿರ ರೂಪಾಯಿ ಪ್ರೋತ್ಸಾಹಧನ ನೀಡಲಾಗುತ್ತಿದೆ. ಇದರೊಂದಿಗೆ ಆಶಾ ಕಾರ್ಯಕರ್ತೆಯರಿಗೆ ಸ್ವಸಹಾಯ ಹಾಗೂ ಸ್ತ್ರೀಶಕ್ತಿ ಸಂಘಗಳ ಮಾದರಿಯಲ್ಲಿ ಸಹಕಾರ ಇಲಾಖೆಯಿಂದ ಸಾಲಸೌಲಭ್ಯ ಒದಗಿಸುವ ಮೂಲಕ ಅವರುಗಳಿಗೂ ಹಣಕಾಸಿನ ಭದ್ರತೆ ನೀಡಲು ಚಿಂತನೆ ನಡೆಸಲಾಗಿದೆ, ಸರಕಾರದ ಮಟ್ಟದಲ್ಲಿ ಈ ಸಂಬಂಧ ಸಭೆಗಳೂ ನಡೆದಿದ್ದು, ಆದಷ್ಟು ಶೀಘ್ರವಾಗಿ ನಿರ್ಧಾರವನ್ನು ಪ್ರಕಟಿಸಲಾಗುವುದು ಎಂದು ಸಹಕಾರ ಮುಖ್ಯಮಂತ್ರಿಗಳ ಗಮನಕ್ಕೂ ತರಲಾಗಿದೆ. ಇನ್ನು 2-3 ದಿನಗಳಲ್ಲಿ ತೀರ್ಮಾನವನ್ನು ಪ್ರಕಟಿಸಲಾಗುವುದು ಎಂದು ಹೇಳಿದರು.

ಕೋವಿಡ್ ಪರಿಸ್ಥಿತಿ ಇನ್ನೂ ಮುಂದುವರಿದಿರುವ ಕಾರಣ ಸಾಲ ಮರುಪಾವತಿ ಅವಧಿಯನ್ನು ವಿಸ್ತರಣೆ ಮಾಡಬೇಕೆಂಬ ಬಗ್ಗೆ ರೈತರಿಂದ ಮನವಿಗಳು ಬಂದಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಜೊತೆಯೂ ಚರ್ಚಿಸಲಾಗಿದೆ. ಕಳೆದ ವರ್ಷ ರೈತರಿಗೆ 13,500 ಕೋಟಿ ರೂಪಾಯಿ ಸಾಲ ಕೊಡಲಾಗಿತ್ತು. ಪ್ರಸಕ್ತ ಸಾಲಿನಲ್ಲಿ ನಬಾರ್ಡ್‍ನಿಂದ ಹೆಚ್ಚುವರಿ ಒಂದು ಸಾವಿರ ಕೋಟಿ ರೂಪಾಯಿ ಲಭಿಸಿರು ವುದರಿಂದ

(ಮೊದಲ ಪುಟದಿಂದ) ಈ ಬಾರಿ 14,500 ಕೋಟಿ ರೂಪಾಯಿ ಸಾಲ ನೀಡಲು ಚಾಲನೆ ಕೊಟ್ಟಿದ್ದೇವೆ. ಎಲ್ಲ ರೈತರಿಗೂ ಸಂಪೂರ್ಣವಾಗಿ ಸಾಲ ಸಿಗಬೇಕು ಎಂಬ ದೃಷ್ಟಿಯಿಂದ ಮುಂದಿನ ಸಾಲಿನಲ್ಲಿ 20 ಸಾವಿರ ಕೋಟಿ ರೂಪಾಯಿ ಸಾಲದ ವ್ಯವಸ್ಥೆ ಮಾಡಬೇಕು. ಈ ಸಂಬಂಧ ಕೇಂದ್ರದ ಗಮನ ಸೆಳೆಯಬೇಕೆಂದು ಮುಖ್ಯ ಮಂತ್ರಿಗಳ ಬಳಿಯೂ ಮನವಿ ಮಾಡಿದ್ದೇವೆ ಎಂದು ಸಚಿವರು ತಿಳಿಸಿದರು.

ಶಾಸಕ ಅಪ್ಪಚ್ಚು ರಂಜನ್ ಮಾತನಾಡಿ, ಸಚಿವ ಸೋಮಶೇಖರ್ ಅವರು ಸಹಕಾರ ಇಲಾಖೆ ಮೂಲಕ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 53 ಕೋಟಿ ರೂಪಾಯಿಯನ್ನು ಸಂಗ್ರಹಿಸಿಕೊಟ್ಟಿದ್ದಾರೆ. ಇದಕ್ಕೆ ಅನೇಕ ಸಹಕಾರಿಗಳ ಕೊಡುಗೆ ಇದೆ. ಇದು ಉತ್ತಮ ಕಾರ್ಯ ಎಂದು ಹೇಳಿದರು.

ಶಾಸಕ ಕೆ.ಜಿ. ಬೋಪಯ್ಯ ಮಾತನಾಡಿ, ಸಹಕಾರಿ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಎಸ್.ಟಿ. ಸೋಮಶೇಖರ್ ಅವರು ಈಗ ಅದೇ ಖಾತೆಗೆ ಸಚಿವರಾಗಿದ್ದು, ಅಭಿವೃದ್ಧಿ ದೃಷ್ಟಿಯಿಂದ ಸಹಾಯ ವಾಗಿದೆ. ಅವರ ಇಲಾಖೆಯಿಂದ ಪೆÇ್ರೀತ್ಸಾಹಧನ ನೀಡುತ್ತಿರುವ ಕಾರ್ಯ ಶ್ಲಾಘನೀಯ ಎಂದು ತಿಳಿಸಿದರು.

ರುಪೇ ಕಾರ್ಡ್ ಬಗ್ಗೆ ಹೊಸ ಆದೇಶ ಹೊರಡಿಸಲಾಗಿತ್ತು. ಇದರಿಂದ ರೈತರಿಗೆ ತೀವ್ರ ಸಮಸ್ಯೆಯಾಗುತ್ತಿದ್ದ ಹಿನ್ನೆಲೆಯಲ್ಲಿ ನಾವೆಲ್ಲರೂ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಸಹಕಾರ ಸಚಿವರಾದ ಸೋಮಶೇಖರ್ ಅವರ ಗಮನಕ್ಕೂ ತಂದಾಗ ಅವರು ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡು ಸಿಎಂಗೆ ಮನವರಿಕೆ ಮಾಡಿ ಹಳೇ ಪದ್ಧತಿಯೇ ಯಥಾವತ್ತಾಗಿ ಮುಂದುವರಿಸುವಂತೆ ಪುನರ್ ಆದೇಶ ನೀಡುವಂತೆ ಮಾಡಿದ್ದಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ತಿಳಿಸಿದರು.

ಜನರು ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕು. ಸ್ಯಾನಿಟೈಸರ್, ಮಾಸ್ಕ್ ಹಾಕಿಕೊಳ್ಳುವುದರ ಜೊತೆಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಜಿಲ್ಲಾಡಳಿತವೂ ಕೊರೊನಾ ತಡೆಯುವ ನಿಟ್ಟಿನಲ್ಲಿ ದಕ್ಷತೆಯಿಂದ ಕೆಲಸ ಮಾಡುತ್ತಿದ್ದು, ಅದನ್ನು ಮುಂದುವರೆಸುವಂತೆ ಕಿವಿಮಾತು ಹೇಳಿದರು.

ವಿಧಾನಪರಿಷತ್ ಸದಸ್ಯ ಸುನಿಲ್ ಸುಬ್ರಮಣಿ ಮಾತನಾಡಿ, ಕೊರೊನಾ ಸಂಬಂಧ ರಾಜ್ಯ ಹಾಗೂ ಕೇಂದ್ರ ಸರಕಾರಗಳ ಸೂಚನೆಗಳನ್ನು ಜನತೆ ಕಟ್ಟುನಿಟ್ಟಿನಿಂದ ಪಾಲಿಸಬೇಕೆಂದರು. ಜಿ.ಪಂ. ಅಧ್ಯಕ್ಷ ಹರೀಶ್ ಮಾತನಾಡಿ, ಆಶಾ ಕಾರ್ಯಕರ್ತೆಯರ ಸೇವೆ ಅಭಿನಂದನಾರ್ಹ ಎಂದರು. ಜಿ.ಪಂ. ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಸಿಇಒ ಕೆ. ಲಕ್ಷ್ಮೀಪ್ರಿಯ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬಾಂಡ್‍ಗಣಪತಿ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.