ಮಡಿಕೇರಿ, ಜು. 3: 2019 ರಲ್ಲಿ ಪ್ರಕಟವಾದ ಕನ್ನಡ ಪುಸ್ತಕಗಳಿಗೆ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿರುವ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗೆ ಪುಸ್ತಕಗಳನ್ನು ಕಳುಹಿಸಲು ತಾ. 31 ರವರೆಗೆ ಅವಕಾಶ ನೀಡಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ವಿ.ಸಿ. ಚನ್ನೇಗೌಡ ತಿಳಿಸಿದ್ದಾರೆ.
ಪುಸ್ತಕಗಳಿಗೆ ಸಂಬಂಧಿಸಿದ ಪ್ರಶಸ್ತಿ ಮತ್ತಿತರ ವಿವರಗಳು ಇಂತಿದೆ: ಬಿಸಲೇರಿ ಜಯಣ್ಣ ಮತ್ತು ಬಿಸಲೇರಿ ಬ್ರದರ್ಸ್ ದತ್ತಿ :2019ರಲ್ಲಿ ಪ್ರಕಟವಾದ ವಿಜ್ಞಾನ ತಂತ್ರಜ್ಞಾನ ಪ್ರಕಾರಗಳಾದ ವೈದ್ಯಕೀಯ ಶಾಸ್ತ್ರ/ಯಂತ್ರಶಾಸ್ತ್ರ/ವಿದ್ಯಾನ್ಮಾನ ಶಾಸ್ತ್ರದಲ್ಲಿ ಕನ್ನಡದಲ್ಲಿ ರಚಿತವಾದ ಆ ವರ್ಷದ ಶ್ರೇಷ್ಠ ಕೃತಿಗಳಿಗೆ ರೂ.10,000 ಗಳ ಬಹುಮಾನ ನೀಡಲಾಗುವುದು.
ಶ್ರೀಮತಿ ವಿ.ಗೌರಮ್ಮ ಗಂಗಾಧರಯ್ಯ ಮತ್ತು ಮಕ್ಕಳ ಸಾಹಿತ್ಯ ಪ್ರಶಸ್ತಿ: 2019 ಜನವರಿ-ಡಿಸೆಂಬರ್ವರೆಗೆ ಪ್ರಕಟವಾದ ದಿ.ಚಚನಿ ಕೃತಿಗಳು, ವಿವಿಧ ಬೇರೆ ಕ್ಷೇತ್ರಗಳಲ್ಲಿ ಅಂದರೆ ಶಾಸನ, ಇತಿಹಾಸ, ಜಾನಪದ, ರೈತ ಹಾಗೂ ಕೃಷಿ ಸಂಬಂಧ ಗಣಿತ, ವಿಜ್ಞಾನ ಇತ್ಯಾದಿ ವಿಷಯಗಳಿಗೆ, ವೀರಶೈವ ಸಾಹಿತ್ಯ ಸಂಶೋಧನಾತ್ಮಕ ಕೃತಿಗಳು ಎಂಬ ಪ್ರಕಾರಕ್ಕೆ ರೂ.10,000/-ಗಳ ನಗದು ಮತ್ತು ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು.
ಶ್ರೀಮತಿ ಭಾರತಿ ಮೋಹನಕೋಟಿ ದತ್ತಿ: 2019 ಜನವರಿಯಿಂದ ಡಿಸೆಂಬರ್ವರೆಗೂ ಪ್ರಕಟವಾದ ಅನುವಾದ ಸಾಹಿತ್ಯ ಕೃತಿಗೆ ರೂ.10,000/-ನಗದು ಮತ್ತು ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು.ಹೊಳಲ್ಕೆರೆ ಪದ್ಮಾವತಮ್ಮ ಶ್ರೀಪಾಲಶೆಟ್ಟಿ ಡಾ.ಮದನಕೇಸರಿ ಜೈನ ದತ್ತಿ: 2019ನೆಯ ಇಸವಿಯಲ್ಲಿ ಪ್ರಕಟವಾದ ಯಾವುದೇ ಜೈನ ಸಾಹಿತ್ಯ ಧರ್ಮಕ್ಕೆ ಸಂಬಂಧಪಟ್ಟ ಕೃತಿಗೆ ಬಹುಮಾನ, ಬಹುಮಾನದ ಮೊತ್ತ ರೂ.7,500/-.
ಪೂಜ್ಯ ಸ್ವಸ್ತಿಶ್ರೀ ದೇವೇಂದ್ರಕೀರ್ತಿ ದತ್ತಿ: 2019 ಜನವರಿಯಿಂದ ಡಿಸೆಂಬರ್ವರೆಗೂ ಪ್ರಕಟವಾದ ಜೈನಧರ್ಮದ ಇತಿಹಾಸ, ಸಾಹಿತ್ಯ ಸಂಸ್ಕøತಿ ಹಾಗೂ ಕಲೆ, ಸಂಶೋಧನಾ ಗ್ರಂಥ, ಗ್ರಂಥ ಸಂಪಾದನೆ, ಪ್ರಾಚೀನ, ಗ್ರಂಥಗಳು ಹಾಗೂ ಅನುವಾದಕ್ಕೆ ಸಂಬಂಧಿಸಿದ ರೂ.6000/-ರೂ.ಗಳ ನಗದು ಹಣ ಮತ್ತು ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು.
ವಸುದೇವ ಭೂಪಾಲಂ ದತ್ತಿ: 2019ರಲ್ಲಿ ಪ್ರಕಟವಾದ ಅತ್ಯುತ್ತಮ ಕಾದಂಬರಿ ಕೃತಿಗೆ ರೂ.5000/-ಬಹುಮಾನ ನೀಡಲಾಗುವುದು. 2019ರಲ್ಲಿ ಪ್ರಕಟವಾದ ಸಣ್ಣಕಥಾ ಸಂಕಲನಗಳನ್ನು ಸ್ಪರ್ಧೆಗೆ ಕಳುಹಿಸಬಹುದು ರೂ.3000/-ಬಹುಮಾನ ನೀಡಲಾಗುವುದು. 2019ರಲ್ಲಿ ಪ್ರಕಟವಾದ ಮಕ್ಕಳ ಸಾಹಿತ್ಯ ಕೃತಿಗೆ ರೂ.2000/- ಬಹುಮಾನ ನೀಡಲಾಗುವುದು. 2019ರಲ್ಲಿ ಪ್ರಕಟವಾದ ಅನುವಾದಿತ ಕೃತಿಗಳು/ ವೈಚಾರಿಕ ಲೇಖನಗಳು ಕೃತಿಗೆ ರೂ.2000/-ಬಹುಮಾನ ನೀಡಲಾಗುವುದು.
ದಿ||ಡಿ.ಮಾಣಿಕರಾದ ಸ್ಮರಣಾರ್ಥ ಹಾಸ್ಯ ಸಾಹಿತ್ಯ ದತ್ತಿ: 2019ರಲ್ಲಿ ಪ್ರಕಟವಾದ ಯಾವುದೇ ಪ್ರಕಾರದ ಹಾಸ್ಯ ಸಾಹಿತ್ಯ ಕೃತಿಗೆ ರೂ.5000/-ಬಹುಮಾನ ನೀಡಲಾಗುವುದು.
ದಿ||ಡಾ.ಎ.ಎಸ್.ಧರಣೇಂದ್ರಯ್ಯ-ಮನೋವಿಜ್ಞಾನ ದತ್ತಿ: 2019ರಲ್ಲಿ ಪ್ರಕಟವಾದ ಮನೋವಿಜ್ಞಾನ ಸಾಹಿತ್ಯ ಕೃತಿಗೆ ರೂ.5000/-ಬಹುಮಾನ ನೀಡಲಾಗುವುದು. ದಿ||ಎಚ್.ಕರಿಯಣ್ಣ ದತ್ತಿ: 2019ರಲ್ಲಿ ಲೇಖಕಿಯಿಂದ ರಚಿತವಾಗಿರುವ ಮಕ್ಕಳ ಪುಸ್ತಕಕ್ಕೆ ರೂ.500/-ಬಹುಮಾನ ನೀಡಲಾಗುವುದು. ಡಾ||ಎಚ್.ನರಸಿಂಹಯ್ಯ ದತ್ತಿ: 2019ರಲ್ಲಿ ಪ್ರಕಟವಾದ ವೈಚಾರಿಕ ಹಾಗೂ ವೈಜ್ಞಾನಿಕ ಮನೋಭಾವಕ್ಕೆ ಸಂಬಂಧಿಸಿದ ಶ್ರೇಷ್ಠ ಕೃತಿಗೆ ರೂ.500/-ಬಹುಮಾನ ನೀಡಲಾಗುವುದು.
ದಿವಂಗತ ಶ್ರೀಮತಿ ಕೆ.ವಿ. ರತ್ನಮ್ಮ ದತ್ತಿ: 2019ರಲ್ಲಿ ಪ್ರಕಟವಾದ ಉದಯೋನ್ಮುಖ ಬರಹಗಾರ ಅತ್ಯುತ್ತಮ ಚೊಚ್ಚಲ ಪದ್ಯಕೃತಿ ಒಂದಕ್ಕೆ ರೂ.500/-ಬಹುಮಾನ ನೀಡಲಾಗುವುದು. ಸ್ಪರ್ಧೆಯಲ್ಲಿ ಯಾರು ಬೇಕಾದರೂ ಭಾಗವಹಿಸಬಹುದು.
ರತ್ನಾಕರವರ್ಣಿ-ಮುದ್ದಣ-ಅನಾಮಿಕ ದತ್ತಿ: 2019ರಲ್ಲಿ ಪ್ರಕಟವಾದ ಅತ್ಯುತ್ತಮ ಗದ್ಯಕೃತಿ ಒಂದಕ್ಕೆ ಹಾಗೂ ಅತ್ಯುತ್ತಮ ಪದ್ಯಕೃತಿ ಒಂದಕ್ಕೆ ತಲಾ ರೂ.500/- ಬಹುಮಾನ ನೀಡಲಾಗುವುದು. ಸ್ಪರ್ಧೆಯಲ್ಲಿ ಯಾರು ಬೇಕಾದರೂ ಭಾಗವಹಿಸಬಹುದು.
ಪಿ.ಶಾಂತಿಲಾಲ್ ದತ್ತಿ: 2019ರಲ್ಲಿ ಪ್ರಕಟವಾದ ಜೈನ ಸಾಹಿತ್ಯ ಕುರಿತ ಯಾವುದೇ ಪ್ರಕಾರದ ಕನ್ನಡ ಪುಸ್ತಕಕ್ಕೆ ರೂ.500/- ಬಹುಮಾನ ನೀಡಲಾಗುವುದು.
ಅಕ್ಕಮ್ಮ ಗಿರಿಗೌಡ ರುದ್ರಪ್ಪ ದತ್ತಿ: 2019ರಲ್ಲಿ ಪ್ರಕಟವಾಗಿರುವ ಅತ್ಯುತ್ತಮವಾದ ಜಾನಪದ ಸಾಹಿತ್ಯ ಕೃತಿ ಒಂದಕ್ಕೆ ರೂ.500/-ಬಹುಮಾನ ನೀಡಲಾಗುವುದು.
ಕುಂಬಾಸ ಪ್ರಶಸ್ತಿ ದತ್ತಿ: 2019ರಲ್ಲಿ ಪ್ರಕಟವಾದ ಕನ್ನಡ ಹಾಸ್ಯ ಸಾಹಿತ್ಯ ಕೃತಿಗೆ ರೂ.500/- ಬಹುಮಾನ ನೀಡಲಾಗುವುದು. (ಹಾಸ್ಯ ಸಾಹಿತ್ಯದ ಬಗ್ಗೆ ಬರೆದಿರುವ ಪುಸ್ತಕ, ಲೇಖನ, ಚುಟುಕು ಇತ್ಯಾದಿಗಳ ಬಗ್ಗೆ ವಿವರವಾದ ಪರಿಚಯ ಬರೆದು ಕಳುಹಿಸುವುದು.)
ಪ್ರೋ||ಡಿ.ಸಿ.ಅನಂತಸ್ವಾಮಿ ದತ್ತಿ: 2019ರಲ್ಲಿ ಪ್ರಕಟವಾದ ಅತ್ಯುತ್ತಮ ಚೊಚ್ಚಲ ಕವನ ಸಂಕಲನಕ್ಕೆ ರೂ.500/-ಬಹುಮಾನ ನೀಡಲಾಗುವುದು. ಸ್ಪರ್ಧೆಯಲ್ಲಿ ಯಾರು ಬೇಕಾದರೂ ಭಾಗವಹಿಸಬಹುದು.
ಶಿಶು ಸಂಗಮೇಶ ದತ್ತಿ: 2019ರಲ್ಲಿ ಪ್ರಕಟವಾದ ಅತ್ಯುತ್ತಮ ಮಕ್ಕಳ ಸಾಹಿತ್ಯ ಕೃತಿಗೆ ರೂ.500/- ಬಹುಮಾನ ನೀಡಲಾಗುವುದು. ಸ್ಪರ್ಧೆಯಲ್ಲಿ ಯಾರು ಬೇಕಾದರೂ ಭಾಗವಹಿಸಬಹುದು.
ಶ್ರೀಮತಿ ಪಂಪಮ್ಮ-ಶರಣೇಗೌಡ ವಿರುಪಾಪುರ ದತ್ತಿ: 2019ರಲ್ಲಿ ಪ್ರಕಟವಾದ ಉತ್ತಮ ಸಾಹಿತ್ಯ ಕೃತಿಗೆ ರೂ.500/- ಬಹುಮಾನ ನೀಡಲಾಗುವುದು (ರಾಯಚೂರು ಜಿಲ್ಲೆಯ ಬರಹಗಾರರಿಗೆ ಮಾತ್ರ ಸೀಮಿತ)
ಶ್ರೀ ಕೆ.ವಾಸುದೇವಾಚಾರ್ ದತ್ತಿ: 2019ರಲ್ಲಿ ಪ್ರಕಟವಾದ ಸಣ್ಣಕಥಾ ಸಂಕಲನ ಕೃತಿಗೆ ರೂ.500/- ಬಹುಮಾನ ನೀಡಲಾಗುವುದು. ಸ್ಪರ್ಧೆಯಲ್ಲಿ ಯಾರು ಬೇಕಾದರೂ ಭಾಗವಹಿಸಬಹುದು. ಅಸುಂಡಿ ಹುದ್ದಾರ್ ಕೃಷ್ಣರಾವ್ ಸ್ಮಾರಕ ದತ್ತಿ: 2019ರಲ್ಲಿ ಪ್ರಕಟವಾದ ಹರಿದಾಸ ಸಾಹಿತ್ಯ ಕುರಿತ ಕೃತಿಗೆ ರೂ.250/- ಬಹುಮಾನ ನೀಡಲಾಗುವುದು.
ಜಿ.ಪಿ. ರಾಜರತ್ನಂ ಸಂಸ್ಮರಣ ದತ್ತಿ: (ಮಕ್ಕಳ ಪುಸ್ತಕ ಬಹುಮಾನ ಸ್ಪರ್ಧೆ-ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಬರಹಗಾರರಿಗೆ ಮಾತ್ರ ಅವಕಾಶ) 2019ರಲ್ಲಿ ಪ್ರಕಟವಾದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಬರಹಗಾರರು ಬರೆದಿರುವ ಅತ್ಯುತ್ತಮ ಮಕ್ಕಳ ಪುಸ್ತಕಕ್ಕೆ ರೂ.250/- ಬಹುಮಾನ ನೀಡಲಾಗುವುದು. (ಪುಸ್ತಕ 15 ವರ್ಷ ವಯಸ್ಸಿನ ಒಳಗಿರುವ ಮಕ್ಕಳು ಓದುವಂತಹ ಕೃತಿಯಾಗಿರಬೇಕು).
ಹೆಚ್ಚಿನ ಮಾಹಿತಿಗಾಗಿ ತಿತಿತಿ.ಞಚಿsಚಿಠಿಚಿ.iಟಿ ಮೂಲಕ ಸಹ ಪಡೆದುಕೊಳ್ಳಬಹುದು. ಕಚೇರಿ ವಿಳಾಸ ಕನ್ನಡ ಸಾಹಿತ್ಯ ಪರಿಷತ್ತು ಪಂಪ ಮಹಾ ಕವಿ ರಸ್ತೆ, ಚಾಮರಾಜಪೇಟೆ ಬೆಂಗಳೂರು-560018, ದೂರವಾಣಿ ಸಂಖ್ಯೆ 080-26612991, 26623584 ಸಂಪರ್ಕಿಸುವಂತೆ ಗೌರವ ಕಾರ್ಯದರ್ಶಿ ವಿ.ಸಿ. ಚನ್ನೇಗೌಡ ಅವರು ತಿಳಿಸಿದ್ದಾರೆ.