ಮಡಿಕೇರಿ, ಜು. 7: ಇಂದು ಕೋವಿಡ್ ಸೋಂಕು ದೃಢಪಟ್ಟ ಪ್ರಕರಣಗಳ ಪೈಕಿ 5 ಜನ ಗುಣಮುಖಗೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿರುತ್ತಾರೆ. ಇದರಿಂದ ಜಿಲ್ಲೆಯಲ್ಲಿ ಗುಣಮುಖಗೊಂಡು ಬಿಡುಗಡೆಯಾದ ಪ್ರಕರಣಗಳ ಸಂಖ್ಯೆ 15 ಆಗಿರುತ್ತದೆ. ಓರ್ವ ವ್ಯಕ್ತಿ ಮೃತಪಟ್ಟಿರುತ್ತಾರೆ. ಜಿಲ್ಲೆಯಲ್ಲಿ ಕೋವಿಡ್-19 ರ ಸಂಬಂಧ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಇತರೆ ದೇಶ, ರಾಜ್ಯಗಳಿಂದ ಪಾಸ್ಗಳನ್ನು ಪಡೆದು ಜಿಲ್ಲೆಗೆ ಪ್ರವೇಶಿಸಿರುವ ಜನರನ್ನು ಕಡ್ಡಾಯವಾಗಿ ನಿಯಮಾನುಸಾರ ಸಂಪರ್ಕ ತಡೆಯಲ್ಲಿಡಲಾಗುತ್ತಿದೆ.
ಇತರ ದೇಶ, ರಾಜ್ಯ, ಜಿಲ್ಲೆಗಳಿಂದ ಕಳೆದ 14 ದಿನಗಳಲ್ಲಿ ಪಾಸ್ಗಳನ್ನು ಪಡೆದು ಜಿಲ್ಲೆಗೆ ಪ್ರವೇಶಿಸಿರುವ ಜನರ ಪೈಕಿ ಸಂಪರ್ಕ ತಡೆಯಲ್ಲಿರುವ ಜನರ ವಿವರ ಕೆಳಕಂಡಂತಿದೆ.
ಇತರ ದೇಶದ ಜನರು- 38, ಇತರ ರಾಜ್ಯದ ಜನರು-711,
ಇಲ್ಲಿಯವರೆಗೆ ಒಟ್ಟು 10054 ಗಂಟಲು ದ್ರವ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯ ಪರೀಕ್ಷೆಗೆ ಕಳುಹಿಸಲಾಗಿದೆ.
ಪಾಸಿಟಿವ್ ಪ್ರಕರಣಗಳು- 92, ನೆಗೆಟಿವ್ ವರದಿ ಬಂದ ಪ್ರಕರಣಗಳು-8914, ವರದಿ ನಿರೀಕ್ಷಿತ ಪ್ರಕರಣಗಳು-1048
ದಾಖಲಿರುವ ಪ್ರಕರಣಗಳು: ಕೋವಿಡ್ ಆಸ್ಪತ್ರೆ : 45, ಕೋವಿಡ್ ಕೇರ್ ಸೆಂಟರ್ : 16, ಹೋಂ ಐಸೋಲೇಶನ್ : 15
ಸಕ್ರಿಯ ಪ್ರಕರಣಗಳ ಸಂಖ್ಯೆ: 76, ಜಿಲ್ಲೆಯಲ್ಲಿರುವ ನಿಯಂತ್ರಿತ ಪ್ರದೇಶಗಳ ಸಂಖ್ಯೆ : 36 ಆಗಿರುತ್ತದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.