ಶನಿವಾರಸಂತೆ, ಜು. 16: ಅಕ್ರಮವಾಗಿ ಜೂಜಾಡುತ್ತಿದ್ದ ಜೂಜು ಅಡ್ಡೆಯ ಮೇಲೆ ಶನಿವಾರಸಂತೆ ಪೊಲೀಸರು ದಾಳಿ ನಡೆಸಿ ಪಣಕ್ಕಿಟ್ಟಿದ್ದ ರೂ. 15,200 ನಗದು ಸೇರಿದಂತೆ 8 ಮಂದಿ ಆರೋಪಿಗಳನ್ನು ವಶಕ್ಕೆ ಪಡೆದು ಮೊಕದ್ದಮೆ ದಾಖಲಿಸಿದ್ದಾರೆ.
ಆಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸಗುತ್ತಿ ಗ್ರಾಮದ ಕಾಫಿ ತೋಟದಲ್ಲಿ ಜೂಜಾಟ ನಡೆಯುತ್ತಿರುವ ಬಗ್ಗೆ ಪೊಲೀಸ್ ವೃತ್ತ ನಿರೀಕ್ಷಕ ನಂಜುಂಡೇಗೌಡ ಅವರಿಗೆ ದೊರೆತ ಖಚಿತ ಮಾಹಿತಿಯ ಮೇರೆ ಅವರ ಮಾರ್ಗದರ್ಶನದಲ್ಲಿ ಶನಿವಾರಸಂತೆ ಪೊಲೀಸರು ಇಸ್ಪಿಟ್ ಅಡ್ಡಗೆ ದಾಳಿ ನಡೆಸಿ ಜೂಜಾಟದಲ್ಲಿ ತೊಡಗಿದ್ದ 8 ಮಂದಿಯನ್ನು ಬಂಧಿಸಿ ಕಣದಲ್ಲಿದ್ದ ರೂ. 15,200 ವಶಪಡಿಸಿಕೊಂಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಆರೋಪಿಗಳನ್ನು ಠಾಣಾ ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಯಿತು.
ಕಾರ್ಯಾಚರಣೆಯಲ್ಲಿ ಪೊಲೀಸ್ ಠಾಣಾಧೀಕಾರಿ ದೇವರಾಜ್, ಹೆಡ್ಕಾನ್ಸ್ಟೇಬಲ್ಗಳಾದ ಬೋಪಣ್ಣ, ಶಶಿಕುಮಾರ್, ವಿವೇಕ್, ರವಿಚಂದ್ರ, ಸಿಬ್ಬಂದಿಗಳಾದ ಎಂ.ವಿ. ಶಫೀಕ್, ವಿನಯ, ಮುರುಳಿ ಇತರರು ಭಾಗವಹಿಸಿದ್ದರು.