ಮಡಿಕೇರಿ, ಜು. 18: ಅರಕಲಗೂಡು ಮಲ್ಲಿಪಟ್ಟಣದಿಂದ ಶನಿವಾರಸಂತೆಗೆ ಸರಬರಾಜಾಗುತ್ತಿರುವ ವಿದ್ಯುತ್ ಮಾರ್ಗದಲ್ಲಿ ತುರ್ತು ನಿರ್ವಹಣೆ ಮತ್ತು ದುರಸ್ತಿ ಕಾರ್ಯ ನಿರ್ವಹಿಸಬೇಕಾಗುವುದರಿಂದ ತಾ. 21 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ 66/11 ಕೆ.ವಿ ವಿದ್ಯುತ್ ಉಪ ಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಹಂಡ್ಲಿ, ಕೊಡ್ಲಿಪೇಟೆ, ಶನಿವಾರಸಂತೆ, ಗೋಪಾಲಪುರ, ಬಲ್ಲಾರಳ್ಳಿ, ಕಿತ್ತೂರು ಗೌಡಳ್ಳಿ, ನಿಡ್ತ, ಅಂಕನಹಳ್ಳಿ, ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಆದ್ದರಿಂದ ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ಸೆಸ್ಕ್ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಸೋಮಶೇಖರ್ ಕೋರಿದ್ದಾರೆ.