ಸೋಮವಾರಪೇಟೆ,ಜು.20: ಪಟ್ಟಣ ಪಂಚಾಯಿತಿ ವ್ಯಾಪ್ತಿಯ 11 ವಾರ್ಡ್‍ಗಳ ಕೊರೊನಾ ಜಾಗೃತಿ ಸಮಿತಿ ಸಭೆ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು. ಪೌರಾಡಳಿತ ಇಲಾಖೆ ಅಧಿಕಾರಿಗಳು ಆನ್‍ಲೈನ್ ಮೂಲಕ ತರಬೇತಿ ನೀಡಿದರು. ವಾರ್ಡ್‍ಗಳಲ್ಲಿ ಸ್ವಚ್ಛತೆಯ ಬಗ್ಗೆ ಗಮನ ಹರಿಸಬೇಕು. ಭಿತ್ತಿ ಪತ್ರಗಳ ಮೂಲಕ ಕೋವಿಡ್-19 ಸೋಂಕಿನ ಬಗ್ಗೆ ಜಾಗೃತಿ ಮೂಡಿಸಬೇಕು. ಹೊರ ಜಿಲ್ಲೆ, ರಾಜ್ಯಗಳಿಂದ ಬಂದ ವ್ಯಕ್ತಿಗಳ ಬಗ್ಗೆ ಮಾಹಿತಿ ಸಂಗ್ರಹಿಸಿ, ನಿಯಮಗಳ ಬಗ್ಗೆ ಸೂಕ್ತ ತಿಳುವಳಿಗೆ ನೀಡಬೇಕು ಎಂದರು.

ಸಭೆಯಲ್ಲಿ ವಾರ್ಡ್ ಕೊರೊನಾ ಜಾಗೃತಿ ಸಮಿತಿ ಪದಾಧಿಕಾರಿಗಳು, ಪ.ಪಂ. ಮುಖ್ಯಾಧಿಕಾರಿ ನಾಚಪ್ಪ, ಆರೋಗ್ಯ ನಿರೀಕ್ಷಕ ಉದಯ ಕುಮಾರ್ ಅವರುಗಳು ಉಪಸ್ಥಿತರಿದ್ದರು.