ಬೆಂಗಳೂರು, ಜು. 22: ಒಂದು ವರ್ಷದ ಹಿಂದೆ ಕಾಂಗ್ರೆಸ್, ಜೆಡಿಎಸ್ ಮೈತ್ರಿ ಸರ್ಕಾರದ ಪತನಕ್ಕೆ ಕಾರಣವಾಗಿದ್ದ ಮಾಜಿ ಸಚಿವ ಕೊಡಗು-ಮೈಸೂರು ಸಂಸದರಾಗಿದ್ದ ಹೆಚ್. ವಿಶ್ವನಾಥ್ ಹಾಗೂ ಆಪರೇಷನ್ ಕಮಲದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ಸೇರಿದಂತೆ ಐವರನ್ನು ರಾಜ್ಯ ವಿಧಾನ ಪರಿಷತ್ಗೆ ನಾಮನಿರ್ದೇಶನ ಮಾಡಲಾಗಿದೆ. ರಾಜ್ಯಪಾಲ ವಜುಭಾಯಿ ವಾಲಾ ಅವರು ಈ ಆದೇಶ ಹೊರಡಿಸಿದ್ದಾರೆ. ಸಾಹಿತ್ಯ ಕ್ಷೇತ್ರದಿಂದ ಹೆಚ್. ವಿಶ್ವನಾಥ್, ಸಿನಿಮಾ ಕ್ಷೇತ್ರದಿಂದ ಸಿ.ಪಿ. ಯೋಗೇಶ್ವರ್, ಸಮಾಜ ಸೇವೆ ಕ್ಷೇತ್ರದಿಂದ ವಿಶ್ವನಾಥ್ಗೆ ಎಂಎಲ್ಸಿ ಸ್ಥಾನ
(ಮೊದಲ ಪುಟದಿಂದ) ಭಾರತಿ ಶೆಟ್ಟಿ, ಶಿಕ್ಷಣ ಕ್ಷೇತ್ರದಿಂದ ಸಾಬಣ್ಣ ತಳವಾರ, ಬುಡಕಟ್ಟು ಕ್ಷೇತ್ರದಿಂದ ಶಾಂತಾರಾಂ ಸಿದ್ದಿ ಅವರನ್ನು ರಾಜ್ಯ ಸರ್ಕಾರ ವಿಧಾನ ಪರಿಷತ್ಗೆ ನಾಮನಿರ್ದೇಶನ ಮಾಡಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಸೂಚನೆ ಯಂತೆ ಎಚ್. ವಿಶ್ವನಾಥ್ ಹಾಗೂ ಸಿ.ಪಿ. ಯೋಗೇಶ್ವರ್ ಅವರನ್ನು ಹಾಗೂ ಸಂಘದ ಹಿನ್ನೆಲೆಯ ಮೂವರನ್ನು ಪರಿಷತ್ಗೆ ನಾಮನಿರ್ದೇಶನ ಮಾಡಲಾಗಿದೆ.