*ಸಿದ್ದಾಪುರ, ಜು. 22: ಕತ್ತಲೆಕಾಡು ಗ್ರಾಮದಿಂದ ಅಬ್ಯಾಲದವರೆಗೆ ಕಾಂಕ್ರೀಟ್ ರಸ್ತೆ ನಿರ್ಮಾಣವಾಗಬೇಕೆಂದು ಬೇಡಿಕೆ ಯಿಟ್ಟ ಹಿನ್ನೆಲೆ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅವರು ಸೂಕ್ತ ರೀತಿಯಲ್ಲಿ ಸ್ಪಂದಿಸಿದ್ದಾರೆ ಎಂದು ಸೋಮವಾರ ಪೇಟೆ ತಾ.ಪಂ. ಸದಸ್ಯ ಬಲ್ಲಾರಂಡ ಮಣಿ ಉತ್ತಪ್ಪ ತಿಳಿಸಿದ್ದಾರೆ. ಮುಂದಿನ ಬಜೆಟ್ನಲ್ಲಿ ಅನುದಾನ ಮೀಸಲಿಡುವು ದಾಗಿ ಶಾಸಕರು ಭರವಸೆ ನೀಡಿದ್ದಾರೆ ಎಂದು ಅವರು ಹೇಳಿದ್ದಾರೆ.