ಮಡಿಕೇರಿ, ಜು. 24: ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ 2019-20ನೇ ಸಾಲಿನ ಗೌರವ ಪ್ರಶಸ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಕೊಡವ ಸಾಹಿತ್ಯ ಕ್ಷೇತ್ರ, ಕೊಡವ ಸಂಶೋಧನ ಕ್ಷೇತ್ರ, ಕೊಡವ ಕಲಾ ಕ್ಷೇತ್ರ ಈ ಮೂರು ಕ್ಷೇತ್ರಗಳಲ್ಲಿ ಅನನ್ಯ ಸೇವೆ ಸಲ್ಲಿಸಿದ ಮಹನೀಯರನ್ನು 2019-20 ರ ಸಾಲಿನ ಪ್ರಶಸ್ತಿಗೆ ಪರಿಗಣಿಸಲಾಗುವುದು. ಪ್ರತಿಯೊಂದು ಕ್ಷೇತ್ರಕ್ಕೆ ತಲಾ ಒಬ್ಬರಂತೆ 3 ಜನ ಸಾಧಕರನ್ನು ಗೌರವ ಪ್ರಶಸ್ತಿಗೆ ಆಯ್ಕೆ ಮಾಡಲಾಗುವುದು.

ಅರ್ಜಿಗಳನ್ನು ಸ್ವತಃ ಸಾಧಕರೇ ಸಲ್ಲಿಸಬಹುದು ಅಥವಾ ಸಾಧಕರ ಅಭಿಮಾನಿಗಳು ಶಿಫಾರಸ್ಸು ಮಾಡಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವವರು ತಮ್ಮ ಸೇವಾ ವಿವರ ಹಾಗೂ ವ್ಯಕ್ತಿ ಪರಿಚಯದ ಎಲ್ಲಾ ಮಾಹಿತಿಗಳನ್ನು ಕಳುಹಿಸಬೇಕು. ಅರ್ಜಿಯನ್ನು ಭಾವಚಿತ್ರ ಹಾಗೂ ದಾಖಲೆಗಳ ಜೆರಾಕ್ಸ್ ಪ್ರತಿಗಳೊಂದಿಗೆ ಅಕಾಡೆಮಿಗೆ ಕಳುಹಿಸಿಕೊಡಬಹುದು. (ಈಗಾಗಲೇ ಅರ್ಜಿ ಸಲ್ಲಿಸಿರುವವರು, ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆಯಿರುವುದಿಲ್ಲ).

ಪುಸ್ತಕ ಬಹುಮಾನ 2019-20: 2019-20ರ ಪುಸ್ತಕ ಬಹುಮಾನ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಲೇಖಕರು ಅಥವಾ ಪ್ರಕಾಶಕರು ಸಲ್ಲಿಸಬಹುದಾಗಿದೆ. ತಾ. 1.1.2019 ರಿಂದ 31.12.2019 ರ ನಡುವೆ ಪ್ರಕಟಗೊಂಡ ಪುಸ್ತಕಗಳನ್ನು 2019-20 ರ ಸಾಲಿನ ಪುಸ್ತಕ ಬಹುಮಾನಕ್ಕೆ ಪರಿಗಣಿಸಲಾಗುವುದು. ಕೊಡವ ಕವನ ಸಂಕಲನ, ಕೊಡವ ಕಥಾ ಸಂಕಲನ, ಕೊಡವ ಕಾದಂಬರಿ, ಕೊಡವ ಕಾವ್ಯ, ಕೊಡವ ನಾಟಕ, ಕೊಡವ ಭಾಷೆ ಮತ್ತು ಸಂಸ್ಕøತಿಯ ಬಗ್ಗೆ ಅಧ್ಯಯನ ಗ್ರಂಥ ಹಾಗೂ ಕೊಡವ ಭಾಷೆಯಿಂದ ಇತರ ಭಾಷೆಗೆ ಅಥವಾ ಅನ್ಯ ಭಾಷೆಯಿಂದ ಕೊಡವ ಭಾಷೆಗೆ ಭಾಷಾಂತರಿತ ಕೃತಿಗಳನ್ನು ಬಹುಮಾನಕ್ಕೆ ಪರಿಗಣಿಸಲಾಗುವುದು.

ಅಕಾಡೆಮಿಯು ಹೆಚ್ಚು ಸಂಖ್ಯೆಯಲ್ಲಿ ಸ್ವೀಕರಿಸುವ ಪುಸ್ತಕಗಳ 3 ಪ್ರಕಾರಗಳನ್ನು ಮಾತ್ರ ಪುಸ್ತಕ ಬಹುಮಾನಕ್ಕೆ ಪರಿಗಣಿಸಲಾಗುವುದು. ಪುಸ್ತಕಗಳ ತಲಾ 4 ಪ್ರತಿಗಳನ್ನು ಅರ್ಜಿಯೊಂದಿಗೆ ಸಲ್ಲಿಸತಕ್ಕದ್ದು. (ಈಗಾಗಲೇ ಅರ್ಜಿ ಸಲ್ಲಿಸಿರುವವರು, ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆಯಿರುವುದಿಲ್ಲ).

ಪ್ರಶಸ್ತಿಗೆ ಅರ್ಜಿ ಸಲ್ಲಿಸುವವರು ಲಕೋಟೆಯ ಮೇಲೆ ಕೊಡವ ಅಕಾಡೆಮಿ ಗೌರವ ಪ್ರಶಸ್ತಿ - 2019 ಹಾಗೂ ಪುಸ್ತಕ ಬಹುಮಾನಕ್ಕೆ ಅರ್ಜಿ ಸಲ್ಲಿಸುವವರು ಲಕೋಟೆಯ ಮೇಲೆ ಕೊಡವ ಅಕಾಡೆಮಿ ಪುಸ್ತಕ ಬಹುಮಾನ ಯೋಜನೆ 2019-20 ಎಂದು ಕಡ್ಡಾಯವಾಗಿ ಬರೆದು, ರಿಜಿಸ್ಟ್ರಾರ್, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ, ಸ್ಕೌಟ್ ಭವನ, ಮ್ಯಾನ್ಸ್ ಕಾಂಪೌಂಡ್, ಮಡಿಕೇರಿ 571 201 ದೂ. 08272-229074, ಈ ವಿಳಾಸಕ್ಕೆ ತಾ. 4.8.2020 ರೊಳಗೆ ಸಲ್ಲಿಸುವಂತೆ ಅಕಾಡೆಮಿ ರಿಜಿಸ್ಟ್ರಾರ್, ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.