ಮಡಿಕೇರಿ, ಜು. 29: ಜಿಲ್ಲೆಯಲ್ಲಿ ತಾ. 30 ಮತ್ತು 31 ರಂದು ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಡೆಯಲಿದ್ದು, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿನ ಪ್ರದೇಶವನ್ನು ನಿಷೇಧಿತ ಸ್ಥಳ ಎಂದು ಘೋಷಿಸಿ ಆದೇಶಿಸಿದ್ದಾರೆ.

ಪರೀಕ್ಷಾ ಕೇಂದ್ರದ ಹೆಸರು ಇಂತಿದೆ: ಮಡಿಕೇರಿ ಸರ್ಕಾರಿ ಪದವಿಪೂರ್ವ ಕಾಲೇಜು, ಸಂತ ಜೋಸೆಫರ ಬಾಲಕಿಯರ ಸಂಯುಕ್ತ ಪದವಿಪೂರ್ವ ಕಾಲೇಜು, ಸೋಮವಾರಪೇಟೆ ಸರ್ಕಾರಿ ಪದವಿಪೂರ್ವ ಕಾಲೇಜು, ವೀರಾಜಪೇಟೆ ಸರ್ಕಾರಿ ಪದವಿಪೂರ್ವ ಕಾಲೇಜು ಈ ಪರೀಕ್ಷಾ ಕೇಂದ್ರಗಳಲ್ಲಿ ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಮಾಸ್ಕ್-ಮುಖಗವಸು ಧರಿಸುವುದು, ಶುಚಿತ್ವ ಮತ್ತು ನೈರ್ಮಲ್ಯ ಕಾಪಾಡುವುದು, ಪರೀಕ್ಷಾ ಕೇಂದ್ರದ ಆವರಣದೊಳಗೆ ಸಂಬಂಧಪಡದ ಯಾವುದೇ ವ್ಯಕ್ತಿಗಳ ಪ್ರವೇಶ ನಿಷೇಧಿಸಿದೆ, ಯಾವುದೇ ನಿಯಮಬಾಹಿರ ಚಟುವಟಿಕೆ/ ಅವ್ಯವಹಾರಗಳಿಗೆ ಆಸ್ಪದವಿರಬಾರದು.

ಈ ಆದೇಶವು ಪರೀಕ್ಷಾ ದಿನಗಳಂದು ಬೆಳಿಗ್ಗೆ 10 ಗಂಟೆಯಿಂದ ಅಪರಾಹ್ನ 4.30 ಗಂಟೆಯವರೆಗೆ ಮಾತ್ರ ಚಾಲ್ತಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.