ಮಡಿಕೇರಿ, ಆ. 2 : ಸಂಖ್ಯೆ 16 ಮತ್ತು 18ನೇ ವಾರ್ಡ್ನಲ್ಲಿ ಭಾನುವಾರ ಕರ್ನಾಟಕ ರಾಜ್ಯದ ಬಿಜೆಪಿ ಸರ್ಕಾರದ ಒಂದು ವರ್ಷ ಆಡಳಿತದಲ್ಲಿ ಮಾಡಿದ ಸಾಧನೆಯ ಕರಪತ್ರಗಳನ್ನು ಮನೆಮನೆಗೆ ಹಂಚಲಾಯಿತು. ಈ ಸಂದರ್ಭದಲ್ಲಿ ಹಿರಿಯ ನಾಗರಿಕರ ಆರೋಗ್ಯ ಕ್ಷೇಮ ವಿಚಾರಿಸಿ, ಥರ್ಮಲ್ ಸ್ಕ್ರೀನ್ ಮೂಲಕ ಉಷ್ಣಾಂಶ ಪರೀಕ್ಷಿಸಲಾಯಿತು. ವಿಧಾನ ಪರಿಷತ್ ಸದಸ್ಯರಾದ ಸುನಿಲ್ ಸುಬ್ರಮಣಿ, ನಗರ ಬಿಜೆಪಿ ಅಧ್ಯಕ್ಷ ಮನು ಮಂಜುನಾಥ್, ಜಿಲ್ಲಾ ಕಾರ್ಯದರ್ಶಿ ಸತೀಶ್, ವಾರ್ಡ್ ಕಾರ್ಯದರ್ಶಿ ಪ್ರಭು ಹಾಜರಿದ್ದರು.