ಕುಶಾಲನಗರ, ಆ. 8: ಕುಶಾಲನಗರ ವ್ಯಾಪ್ತಿಯಲ್ಲಿ ಕಳೆದ ಮೂರು ವರ್ಷಗಳಿಂದ ಕಾವೇರಿ ನದಿ ಪ್ರವಾಹ ಜನಜೀವನ ಅಸ್ತವ್ಯಸ್ತ ಗೊಳ್ಳುತ್ತಿರುವ ಹಿನೆÀ್ನಲೆಯಲ್ಲಿ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಪ್ರವಾಹ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಲು ಆದ್ಯತೆ ಮೇಲೆ ಯೋಜನೆ ರೂಪಿಸಲಾಗುವುದು ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಭರವಸೆ ನೀಡಿದ್ದಾರೆ.
ಅವರು ಕುಶಾಲನಗರದ ಪ್ರವಾಹ ಪೀಡಿತ ಬಡಾವಣೆಗಳಿಗೆ ಭೇಟಿ ನೀಡಿ ಸಂತ್ರಸ್ತರ ಅಹವಾಲು ಸ್ವೀಕರಿಸಿದ ನಂತರ ಮಾತನಾಡಿದರು. ಈಗಾಗಲೇ ಕುಶಾಲನಗರ ವ್ಯಾಪ್ತಿಯಲ್ಲಿ ಸ್ಥಳೀಯರ ಆಗ್ರಹದ ಮೇರೆಗೆ ಕ್ಷೇತ್ರ ಶಾಸಕರ ಮೂಲಕ ಕಾವೇರಿ ನದಿ ನಿರ್ವಹಣೆ ಮತ್ತು ಹೂಳೆತ್ತುವ ಕಾಮಗಾರಿ ನಡೆಸಲಾಗಿತ್ತು. ಕಾಮಗಾರಿಗೆ ಕೆಲವರು ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಪೂರ್ಣಗೊಂಡಿಲ್ಲ. ಈ ಅನುದಾನದ ಜೊತೆಗೆ ಇನ್ನೂ ಹೆಚ್ಚಿನ ಅನುದಾನ ಕಲ್ಪಿಸಿ ನದಿಯ ಮೂಲಸ್ವರೂಪದ ಕಾರ್ಯಕ್ಕೆ ಮುಂದಾಗುವುದಾಗಿ ಹೇಳಿದರು.
ಕೊಡಗು ಜಿಲ್ಲೆಗೆ ಕಲ್ಪಿಸಿರುವ ರೂ.500 ಕೋಟಿ ವಿಶೇಷ ಪ್ಯಾಕೆಜ್ ನಲ್ಲಿ ನದಿ ನಿರ್ವಹಣೆ ಕಾಮಗಾರಿಗೂ ಅನುದಾನ ಕಲ್ಪಿಸಲು ಮುಖ್ಯಮಂತ್ರಿಗಳ ಜೊತೆ ಚರ್ಚಿಸಲಾಗುವುದು. ಹೆಚ್ಚಿನ ಪ್ರವಾಹ ತಪ್ಪಿಸುವ ಹಿನೆÀ್ನಲೆಯಲ್ಲಿ ಹಾರಂಗಿ ಅಣೆಕಟ್ಟೆಯಿಂದ ಹಂತಹಂತ ವಾಗಿ ಹೆಚ್ಚುವರಿ ನೀರನ್ನು ನದಿಗೆ ಹರಿಸ ಲಾಗುತ್ತಿದೆ. ಶಾಸಕ ಅಪ್ಪಚ್ಚುರಂಜನ್ ಅವರ ಮುತುವರ್ಜಿ ಯಿಂದ ಸದ್ಯ ಪ್ರವಾಹದ ತೀವ್ರತೆ ಕಡಿಮೆಯಾಗಿರು ವುದಾಗಿ ಹೇಳಿದರು. ನದಿ ದಂಡೆಗಳ ಬಡಾವಣೆಗಳ ಸಮಸ್ಯೆಗೆ ಸರಕಾರ ಸ್ಪಂದಿಸುವುದಾಗಿ ಹೇಳಿದ ಸೋಮಣ್ಣ ಅವರು ಮಳೆಗಾಲ ನಂತರ ಕೂಡಲೇ ನದಿ ನಿರ್ವಹಣೆ ಕಾಮಗಾರಿ ಪುನರಾರಂಭ ಗೊಳ್ಳಲಿದೆ. ಸಂತ್ರಸ್ತರಿಗೆ ಎಲ್ಲಾ ರೀತಿಯ ವ್ಯವಸ್ಥೆ ಕಲ್ಪಿಸಿಕೊಡಲು ಸ್ಥಳೀಯ ಪಟ್ಟಣ ಪಂಚಾಯ್ತಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಜನಪ್ರತಿನಿಧಿ ಗಳು ಕೈಗೊಳ್ಳುವ ಯೋಜನೆಗಳಿಗೆ ಪ್ರತಿಯೊಬ್ಬರ ಸಹಕಾರ ಅಗತ್ಯ. ಯಾವುದೇ ರೀತಿಯಲ್ಲಿ ಅಭಿವೃದ್ಧಿ ಕೆಲಸಗಳಿಗೆ ಅಡ್ಡಿಯುಂಟು ಮಾಡುವ ಮನೋಭಾವನೆ ಸಲ್ಲದು ಎಂದರು.
ಈ ಸಂದರ್ಭ ಮಾತನಾಡಿದ ಮೈಸೂರು-ಮಡಿಕೇರಿ ಲೋಕಸಭಾ ಸದಸ್ಯ ಪ್ರತಾಪ್ಸಿಂಹ, ಅಭಿವೃದ್ದಿ ಕಾಮಗಾರಿಗೆ ಯಾರೇ ವಿರೋಧ ಪಡಿಸಿದರೂ ನದಿ ನಿರ್ವಹಣೆ ಕಾಮಗಾರಿ ಮುಂದುವರೆಯುತ್ತದೆ. ನದಿಯಲ್ಲಿ ಹೂಳೆತ್ತುವ ವಿಚಾರದಲ್ಲಿ ವಿವಾದ ಮಾಡುತ್ತಿರುವ ಕಾಂಗ್ರೆಸ್ನ ಕೆಲ ಮಂದಿ ವಿರುದ್ಧ ಪ್ರತಾಪ್ಸಿಂಹ ಆಕ್ರೋಶ ವ್ಯಕ್ತಪಡಿಸಿ, ಜನರಿಗೆ ಸಮಸ್ಯೆಯಾಗಬಾರದೆಂದು ಹೂಳೆತ್ತುವ ಕಾರ್ಯಕ್ಕೆ ಚಾಲನೆ ನೀಡಲಾಗಿತ್ತು. ಬಾಯಿಗೆ ಬಂದಂತೆ ಮಾತನಾಡುತ್ತಿ ರುವಂತಹ ವ್ಯಕ್ತಿಗಳ ಮನೆ ಮುಂದೆ ಮರಳು ಸುರಿದು ಬನ್ನಿ ಎಂದು ವ್ಯಂಗ್ಯವಾಡಿದರು. ರಾಜ್ಯದಲ್ಲಿ ಬಿಜೆಪಿ ಸರಕಾರವಿದೆ. ಮಳೆ ನಿಂತ ಕೂಡಲೇ ಮತ್ತೆ ನದಿಯಲ್ಲಿ ಹೂಳೆತ್ತುವ ಕಾರ್ಯ ಪುನರಾರಂಭಗೊಳ್ಳಲಿದೆ ಎಂದು ಅವರು ತಿಳಿಸಿದರು.
ಈ ಸಂದರ್ಭ ಕ್ಷೇತ್ರ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್, ತಹಶೀಲ್ದಾರ್ ಗೋವಿಂದರಾಜು, ಪಪಂ ಮುಖ್ಯಾಧಿಕಾರಿ ಸುಜಯ್ ಕುಮಾರ್, ಸ್ಥಳೀಯ ಜನಪ್ರತಿನಿಧಿ ಗಳಾದ ಪ್ರಮೋದ್ ಮುತ್ತಪ್ಪ, ಅಮೃತ್ರಾಜ್, ಕುಡಾ ಸದಸ್ಯರಾದ ವಿ.ಡಿ. ಪುಂಡರೀಕಾಕ್ಷ, ವೈಶಾಖ್ ಮತ್ತಿತರರು ಇದ್ದರು.