ಮಡಿಕೇರಿ, ಆ. 20: ಜಿಲ್ಲೆಯಲ್ಲಿ ಕೊರೊನಾ ಸಂಬಂಧ 2 ಸಾವು ಸಂಭವಿಸಿದ್ದು, ಒಟ್ಟು ಸಾವಿನ ಸಂಖ್ಯೆ 16 ಕ್ಕೆ ಏರಿದಂತಾಗಿದೆ. ಶ್ರೀಮಂಗಲ ನಿವಾಸಿ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ 65 ವರ್ಷದ ಪುರುಷ ಹಾಗೂ ಕುಶಾಲನಗರದ 62 ವರ್ಷದ ಕ್ಯಾನ್ಸರ್ ಪೀಡಿತ ಮಹಿಳೆಗೆ ಕೊರೊನಾ ಸೋಂಕು ಕೂಡ ಇದ್ದಿದ್ದು, ಮೃತಪಟ್ಟಿದ್ದಾರೆ. 2 ಸಾವುಗಳನ್ನು ಕೊರೊನಾ ಸಂಬಂಧ ಸಾವು ಎಂದೇ ಪರಿಗಣಿಸಿ ಕೋವಿಡ್ ಮಾರ್ಗಸೂಚಿ ಯಂತೆ ಅಂತ್ಯಕ್ರಿಯೆ ನಡೆಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.ಶ್ರೀಮಂಗಲದ 65 ವರ್ಷದ ಪುರುಷರೊಬ್ಬರು ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದು, ಅವರಿಗೆ ಅಧಿಕ ರಕ್ತದೊತ್ತಡ ಹಾಗೂ ಮಧುಮೇಹ ಕಾಯಿಲೆಗಳು ಕೂಡ ಇತ್ತು. ವಾರದಲ್ಲಿ 3 ಬಾರಿ ಡೈಯಾಲಿಸಿ ಕೂಡ ಮಾಡಿಸುತ್ತಿದ್ದರು. ತಾ.7 ರಂದು ಗೋಣಿಕೊಪ್ಪ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕೋವಿಡ್ ಪರೀಕ್ಷೆ ನಡೆಸಿದ್ದು, ಕೋವಿಡ್ ಇರುವು ದಾಗಿಯೂ ದೃಢಪಟ್ಟಿದೆ. ತಾ.19 ರಂದು ಡೈಯಾಲಿಸೀಸ್ ನಡೆಸುತ್ತಿದ್ದ ಸಂದರ್ಭ ರಾತ್ರಿ 10.50ಕ್ಕೆ ಹೃದಯಾ ಘಾತದಿಂದ ಸಾವನ್ನಪ್ಪಿದ್ದಾರೆ. ಕೊರೊನಾ ಇದ್ದುದರಿಂದ ಕೋವಿಡ್ ಸಾವು ಎಂದೇ ಪರಿಗಣಿಸಿ ಕೋವಿಡ್ ಮಾರ್ಗಸೂಚಿಯಂತೆ ಅಂತ್ಯಕ್ರಿಯೆ ನಡೆಸಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಶಾಲನಗರದ ಗುಮ್ಮನ ಕೊಲ್ಲಿಯ ಚೌಡೇಶ್ವರಿ ಬಡಾವಣೆಯ 62 ವರ್ಷದ ಕ್ಯಾನ್ಸರ್ ಪೀಡಿತ ಮಹಿಳೆ ತಾ.18 ರಂದು ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕೊರೊನಾ ಪರೀಕ್ಷೆಗೆ ದ್ರವ ಮಾದರಿ ನೀಡಿದ್ದಾರೆ. ನಂತರ ಮನೆಗೆ ತೆರಳಿದ್ದಾರೆ. ತಾ.19 ರಂದು ತೀವ್ರ ಸುಸ್ತು ಕಾಣಿಸಿಕೊಂಡ ಕಾರಣ ಪುನಃ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಾಗಿದ್ದಾರೆ. ತಾ.20 ರ ಬೆಳಿಗ್ಗೆ ಕೋವಿಡ್
(ಮೊದಲ ಪುಟದಿಂದ) ಪರೀಕ್ಷೆಯ ಫಲಿತಾಂಶ ಬಂದಿದ್ದು, ಸೋಂಕು ದೃಢಪಟ್ಟಿದೆ. ನಂತರ ಅದೇ ದಿನ ಬೆಳಿಗ್ಗೆ 11:30ಕ್ಕೆ ಮೃತಪಟ್ಟಿದ್ದಾರೆ.
ಜಿಲ್ಲೆಯಲ್ಲಿ ಹೊಸದಾಗಿ 39 ಕೊರೊನಾ ಪ್ರಕರಣಗಳು ವರದಿಯಾಗಿವೆ. ಇದುವರೆಗೆ 1125 ಪ್ರಕರಣಗಳು ವರದಿಯಾಗಿದ್ದು, 804 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 16 ಮಂದಿ ಸಾವನ್ನಪ್ಪಿದ್ದು, 305 ಪ್ರಕರಣಗಳು ಸಕ್ರಿಯವಾಗಿವೆ.
ಕೋವಿಡ್ ಆಸ್ಪತ್ರೆಯಲ್ಲಿ 73 ಮಂದಿ, ಕೋವಿಡ್ ಕೇರ್ ಸೆಂಟರ್ನಲ್ಲಿ 73 ಮಂದಿ, ಹೋಮ್ ಐಸೋಲೇಶನ್ನಲ್ಲಿ 159 ಮಂದಿ ದಾಖಲಾಗಿದ್ದಾರೆ. ಜಿಲ್ಲೆಯಾದ್ಯಂತ 275 ನಿಯಂತ್ರಿತ ವಲಯಗಳಿವೆ.
ಹೊಸ ಪ್ರಕರಣಗಳ ವಿವರ
ಸೋಮವಾರಪೇಟೆ ಹೊಸತೋಟ ಅಂಗನವಾಡಿ ಬಳಿಯ 24 ವರ್ಷದ ಮಹಿಳೆ, ವೀರಾಜಪೇಟೆ ವಿಜಯನಗರದ ಚೋಟಾ ಚಾಂಪಿಯನ್ ನರ್ಸರಿ ಶಾಲೆ ಬಳಿಯ 27 ವರ್ಷದ ಪುರುಷ, ಮೂರ್ನಾಡು ಪಂಚರತ್ನ ಹೊಟೇಲ್ ಬಳಿಯ 45 ವರ್ಷದ ಪುರುಷ ಮತ್ತು 36 ವರ್ಷದ ಮಹಿಳೆ, ಪೆÇನ್ನಂಪೇಟೆ ಸಮೀಪದ 31 ವರ್ಷದ ಪುರುಷ, ಅರೆಕಾಡು ಗ್ರಾಮ ಜಯಜೀವ ರಾಮ್ ಕಾಲೋನಿಯ 20 ವರ್ಷದ ಪುರುಷ, ವೀರಾಜಪೇಟೆ ವಿಜಯನಗರ ಸುರೂರ್ ಲಾಡ್ಜ್ ಬಳಿಯ 39 ವರ್ಷದ ಮಹಿಳೆ, ಮಡಿಕೇರಿ ಮೇಲಿನ ಗೌಡ ಸಮಾಜ ಬಳಿಯ 30 ವರ್ಷದÀ ಮಹಿಳೆ, ಮಡಿಕೇರಿ ಕಾಲೇಜು ರಸ್ತೆಯ 61 ವರ್ಷದ ಪುರುಷ, ನೆಲ್ಲಿಹುದಿಕೇರಿ ‘ರಿವರ್ ಸೈಡ್’ನ 21 ವರ್ಷದ ಮಹಿಳೆ, ಕುಶಾಲನಗರ ರಾಧಾಕೃಷ್ಣ ಬಡಾವಣೆಯ 22 ಮತ್ತು 50 ವರ್ಷದÀ ಮಹಿಳೆ, ಅರಪಟ್ಟು ಕಡಂಗಮರೂರು ಮಸೀದಿ ಬಳಿಯ 37 ವರ್ಷದ ಮಹಿಳೆ, ಚೆಯ್ಯಂಡಾಣೆ ಯಡಪಾಲ ಗ್ರಾಮದ ಮಸೀದಿ ಬಳಿಯ 38 ವರ್ಷದ ಮಹಿಳೆ, ಚೆಯ್ಯಂಡಾಣೆ ನೆರಿಯಂದಡ ಗ್ರಾಮದ 33 ವರ್ಷದ ಮಹಿಳೆ, ಕೊಳಕೇರಿ ಗ್ರಾಮದ ಸಮಾಧಿ ಬಳಿಯ 23 ವರ್ಷದ ಮಹಿಳೆ, ವೀರಾಜಪೇಟೆ ವಿ.ಬಾಡಗದ 54 ಮತ್ತು 23 ವರ್ಷದ ಪುರುಷರು, ಕುಶಾಲನಗರ ಮುಳ್ಳುಸೋಗೆಯ 1ನೇ ಬ್ಲಾಕಿನ 53 ಮತ್ತು 49 ವರ್ಷದ ಪುರುಷರು, ಕುಶಾಲನಗರ ಬಲಮುರಿ ದೇವಾಲಯ ಹಿಂಭಾಗದ 48 ವರ್ಷದ ಮಹಿಳೆ, ಕುಶಾಲನಗರ ರಾಧಾಕೃಷ್ಣ ಬಡಾವಣೆಯ ಬಸವೇಶ್ವರ ಟ್ರೇಡರ್ಸ್ ಬಳಿಯ 33 ವರ್ಷದ ಪುರುಷ, ಕುಶಾಲನಗರ ಬಿ.ಎಂ. ರಸ್ತೆಯ ಬಾಟಾ ಶೋ ರೂಂ ಎದುರಿನ 24 ವರ್ಷದ ಪುರುಷ, ವೀರಾಜಪೇಟೆ ಮೈತಾಡಿ ಲೈನ್ ಮನೆಯ 26 ವರ್ಷದ ಪುರುಷ, ಸೋಮವಾರಪೇಟೆ ಬಿಳಿಗೇರಿ ಚೆಂಗಪ್ಪ ಗೌಡ ಲೈನ್ ಮನೆಯ 7 ವರ್ಷದ ಬಾಲಕ, ಸೋಮವಾರಪೇಟೆ ಹಾನಗಲ್ ಅಂಚೆಯ ಟಿ.ಶೆಟ್ಟಳ್ಳಿಯ 70 ವರ್ಷದ ಮಹಿಳೆ, ಸೋಮವಾರ ಪೇಟೆ ಹಾನಗಲ್ ಬಾಣೆಯ 56 ವರ್ಷದ ಮಹಿಳೆ, ಸೋಮವಾರಪೇಟೆ ಅರೆಯೂರಿನÀ 16 ವರ್ಷದ ಬಾಲಕ, ಸೋಮವಾರಪೇಟೆ ತಳ್ತರೆಶೆಟ್ಟಳ್ಳಿಯ 58 ವರ್ಷದ ಪುರುಷ, ಶನಿವಾರಸಂತೆ ಡಿಸಿಸಿ ಬ್ಯಾಂಕ್ ರಸ್ತೆಯ ಸೊಸೈಟಿ ಬಳಿಯ 26 ವರ್ಷದ ಪುರುಷ, ಸೋಮವಾರಪೇಟೆ ಗಂಧದಕೋಟೆ ಗ್ರಾಮದ 54 ವರ್ಷದ ಪುರುಷ ಮತ್ತು 21 ವರ್ಷದ ಮಹಿಳೆ, ಕುಶಾಲನಗರ ವಿ.ಆರ್.ಎಲ್. ರಸ್ತೆಯ ಬಾಪೂಜಿ ಬಡಾವಣೆಯ 37 ವರ್ಷದ ಮಹಿಳೆ, ಕೂಡಿಗೆ ಸೊಸೈಟಿ ಬಳಿಯ 48 ವರ್ಷದ ಮಹಿಳೆ, ಕುಶಾಲನಗರ ಸುಂದರನಗರದ 19 ವರ್ಷದ ಮಹಿಳೆ, ವೀರಾಜಪೇಟೆ ಪೆÇಲೀಸ್ ವಸತಿ ಗೃಹದ 29 ವರ್ಷದ ಪುರುಷ, ಸೋಮವಾರಪೇಟೆ ಹಾಲೇರಿ ತತ್ತಿಬಾಣೆ ಪೈಸಾರಿಯ 48 ವರ್ಷದ ಪುರುಷ, ಮಡಿಕೇರಿ ಮೇಲಿನ ಗೌಡ ಸಮಾಜದ ರಾಘವೇಂದ್ರ ದೇವಾಲಯ ರಸ್ತೆಯ 27 ವರ್ಷದ ಪುರುಷ, ಹಾಸನ ಜಿಲ್ಲೆಯ 23 ವರ್ಷದ ಪುರುಷನಿಗೆ ಸೋಂಕು ದೃಢಪಟ್ಟಿದೆ.