ವೀರಾಜಪೇಟೆ, ಆ. 21: ಬೆಂಗಳೂರು ಕೊಡವ ಸಮಾಜದ ಮಾಜಿ ಅಧ್ಯಕ್ಷ ಹಾಗೂ ದಾನಿ ಬೇರೆರ ಶಂಭು ಅಯ್ಯಣ್ಣ ಅವರು ನಿಧನರಾದ ಹಿನ್ನೆಲೆಯಲ್ಲಿ ಮೈತಾಡಿ ಚಾಮುಂಡೇಶ್ವರಿ ದೇವಾಲಯದ ಆಡಳಿತ ಮಂಡಳಿ ಸದಸ್ಯರು ಹಾಗೂ ಗ್ರಾಮಸ್ಥರು ಪಟ್ಟಣದ ಗಡಿಯಾರ ಕಂಬದ ಬಳಿ ಶ್ರದ್ಧಾಂಜಲಿ ಅರ್ಪಿಸಿದರು. ದೇವಸ್ಥಾನದ ಅಧ್ಯಕ್ಷ ಪಡಿಞರಂಡ ಜಿ. ಅಯ್ಯಪ್ಪ, ಉಪಾಧ್ಯಕ್ಷ ಚಪ್ಪಂಡ ಹರೀಶ್ ಉತ್ತಯ್ಯ, ಕಾರ್ಯದರ್ಶಿ ಅಯ್ಯಮಂಡ ವೇಣು, ಆಡಳಿತ ಮನಂಡಳಿ ಸದಸ್ಯರು, ಗ್ರಾಮಸ್ಥರು ಹಾಜರಿದ್ದರು.