ನಾಪೆÇೀಕ್ಲು, ಆ. 23: ನಾಪೆÇೀಕ್ಲು ಗ್ರಾಮ ಪಂಚಾಯಿತಿ ಚುನಾವಣೆ ಸಮೀಪಿಸುತ್ತಿರುವ ಹಿನ್ನಲೆಯಲ್ಲಿ ನಾಪೆÇೀಕ್ಲು ಹೋಬಳಿ ಕಾಂಗ್ರೆಸ್ ಪಕ್ಷದ ವತಿಯಿಂದ ಚುನಾವಣಾಕಾಂಕ್ಷಿಗಳ ಸಭೆ ಪಟ್ಟಣದಲ್ಲಿ ನಡೆಯಿತು.

ಕಾಂಗ್ರೆಸ್ ಮುಖಂಡ ಎಂ.ಹೆಚ್.ಅಬ್ದುಲ್ ರೆಹಮಾನ್ ಮಾತನಾಡಿ, ಎಲ್ಲರೂ ಪಕ್ಷದ ಹಿತಕ್ಕಾಗಿ ದುಡಿಯಬೇಕು. ಇಲ್ಲಿ ಪ್ರತಿಯೊಬ್ಬರೂ ಗೆಲ್ಲಲೇಬೇಕು. ಗೆದ್ದ ನಂತರ ಪಕ್ಷದ ಕಾರ್ಯಕರ್ತರ, ಸಾರ್ವಜನಿಕರ ಸೇವೆ ಮಾಡುವ ಅಗತ್ಯವಿದೆ ಎಂದರು.

ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಕುಲ್ಲೇಟಿರ ಅರುಣ್ ಬೇಬ ಮಾತನಾಡಿ ಎಲ್ಲರೂ ಪಕ್ಷ ನಿಷ್ಠೆಗೆ ಬದ್ಧರಾಗಿರಬೇಕು ಪಕ್ಷದಲ್ಲಿ ಜಾತಿ, ಧರ್ಮದ ವಿಚಾರಗಳಿಗೆ ಅವಕಾಶ ನೀಡಬಾರದು ಎಂದು ಸಲಹೆ ನೀಡಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎ.ಇಸ್ಮಾಯಿಲ್ ಮಾತನಾಡಿ ನಮ್ಮ ಆಡಳಿತದಲ್ಲಿ ಗ್ರಾಮ ಪಂಚಾಯಿತಿಯಲ್ಲಿ ಉತ್ತಮ ಕೆಲಸ ನಿರ್ವಹಿಸಲಾಗಿದೆ. ಇದು ನಮ್ಮ ಗೆಲುವಿಗೆ ಸಹಕಾರಿಯಾಗಲಿದೆ ಎಂದರು.

ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಸಲೀಂ ಹ್ಯಾರೀಸ್, ಹಿರಿಯ ಮುಖಂಡ ಅರೆಯಡ ಸೋಮಪ್ಪ ಮಾತನಾಡಿದರು.

ಸಭೆಯ ಅಧ್ಯಕ್ಷತೆಯನ್ನು ವಲಯಾಧ್ಯಕ್ಷ ಮಾಚೆಟ್ಟಿರ ಕುಶು ಕುಶಾಲಪ್ಪ ವಹಿಸಿದ್ದರು. ಸಭೆಯಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರು, ಕಾರ್ಯಕರ್ತರು ಇದ್ದರು.