ಮಡಿಕೇರಿ, ಆ. 24: ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಕೊಡಗು ಜಿಲ್ಲಾ ಬಿಜೆಪಿ ವತಿಯಿಂದ ತಲಕಾವೇರಿ ಕ್ಷೇತ್ರದ ಪ್ರಧಾನ ಅರ್ಚಕ ಮತ್ತು ಬಿಜೆಪಿ ನಾಯಕ ನಾರಾಯಣ ಆಚಾರ್ ಮತ್ತು ಅವರ ಪತ್ನಿ ಶಾಂತ ಆಚಾರ್ ಮತ್ತು ಸಹೋದರ ಆನಂದ ತೀರ್ಥ ಸ್ವಾಮೀಜಿ ಮತ್ತು ಅಗಲಿದ ಇಬ್ಬರು ಅರ್ಚಕರಾದ ಶ್ರೀನಿವಾಸ್ ಮತ್ತು ರವಿಕಿರಣ್ ಅವರಿಗೆ ನುಡಿನಮನದ ಮೂಲಕ ಶ್ರದ್ಧಾಂಜಲಿ ಅರ್ಪಿಸಲಾಯಿತು.

ಶಾಸಕ ಅಪ್ಪಚ್ಚು ರಂಜನ್ ಅವರು, ನಾರಾಯಣ ಆಚಾರ್ ಅವರ ಸರಳ, ಸಜ್ಜನಿಕೆ ಮತ್ತು ವಿವಿಧ ಕ್ಷೇತ್ರದಲ್ಲಿ ದುಡಿಯುವ ಸಂದರ್ಭದಲ್ಲಿ ಅವರಿಗಿದ್ದ ಬದ್ಧತೆ ವಿಚಾರಗಳ ಬಗ್ಗೆ ವಿವರಿಸಿದರು. ಮಾಜಿ ಶಾಸಕ ಎಸ್.ಜಿ. ಮೇದಪ್ಪ, ಏಲಕ್ಕಿ ಸಹಕಾರ ಸಂಘದಲ್ಲಿ ಒಟ್ಟಿಗೆ ದುಡಿದ ಅನುಭವ ಹಂಚಿಕೊಂಡರು. ಹಿರಿಯರಾದ ಎಂ.ಬಿ. ದೇವಯ್ಯ, ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ, ಆಚಾರರ ಕುರಿತು ಮಾತನಾಡಿದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಾದಪ್ಪ ಸ್ವಾಗತಿಸಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಪಂಡ ರವಿಕಾಳಪ್ಪ ನಿರೂಪಿಸಿ, ಜಿಲ್ಲಾ ಉಪಾಧ್ಯಕ್ಷ ಅರುಣ್ ಕುಮಾರ್ ವಂದಿಸಿದರು.