ಚೆಟ್ಟಳ್ಳಿ, ಆ. 24: ತನ್ನ ಮಗ 10ನೇ ತರಗತಿ ಪರೀಕ್ಷೆಯಲ್ಲಿ ಅನುತ್ತೀರ್ಣನಾದ ಹಿನ್ನೆಲೆಯಲ್ಲಿ ಮನನೊಂದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಚೆಟ್ಟಳ್ಳಿಯ ಪಿ. ಅಯ್ಯಪ್ಪ ಅವರ ಲೈನ್‍ಮನೆಯಲ್ಲಿ ವಾಸವಾಗಿದ್ದ ರಘು (39) ಎಂಬವರೇ ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಆತ್ಮಹತ್ಯೆ ಕುರಿತಂತೆ ರಘು ಅವರ ಪತ್ನಿ ಮಂಜುಳಾ ಪೊಲೀಸ್ ದೂರು ನೀಡಿದ್ದು, ತಮ್ಮ ಮಗ ಈ ಬಾರಿಯ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಅನುತ್ತೀರ್ಣನಾದ ಹಿನ್ನೆಲೆಯಲ್ಲಿ ತನ್ನ ಪತಿ ತೀವ್ರ ನೊಂದಿದ್ದರಲ್ಲದೆ ಇದರಿಂದಾಗಿಯೇ ಹೆಚ್ಚಾಗಿ ಮದ್ಯ ಸೇವಿಸುತ್ತಿದ್ದರು. ಈ ದಿನ ತಾನು ಕೆಲಸಕ್ಕೆ ತೆರಳಿದ್ದ ವೇಳೆ ಪತಿ ನೇಣು ಬಿಗಿದುಕೊಂಡು ಮನೆಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬದಾಗಿ ವಿವರಿಸಿದ್ದು, ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.