ಗೋಣಿಕೊಪ್ಪ ವರದಿ, ಆ. 24: ತಲಕಾವೇರಿ, ಭಾಗಮಂಡಲ ಕ್ಷೇತ್ರದಲ್ಲಿ ಅರ್ಚಕರಾಗಿ ದೇವರ ಪೂಜೆ ನಡೆಸಲು ಅಮ್ಮಕೊಡವರಿಗೆ ಅವಕಾಶ ನೀಡಬೇಕು ಎಂದು ಅಖಿಲ ಅಮ್ಮಕೊಡವ ಸಮಾಜ ಜಿಲ್ಲಾಧಿಕಾರಿಗೆ ಮಾಡಿಕೊಂಡಿರುವ ಮನವಿಗೆ ಅಖಿಲ ಕೊಡವ ಸಮಾಜ ಸ್ವಾಗತಿಸಿದೆ.

ಈ ಬಗ್ಗೆ ಹೇಳಿಕೆ ನೀಡಿರುವ ಅಖಿಲ ಕೊಡವ ಸಮಾಜ ಉಪಾಧ್ಯಕ್ಷ ಅಜ್ಜಿಕುಟ್ಟೀರ ಸುಬ್ರಮಣಿ ಮಾದಯ್ಯ, ಈ ಹಿಂದೆ ಅಮ್ಮಕೊಡವರು ಅಲ್ಲಿ ಪೂಜೆ ಸಲ್ಲಿಸುತ್ತಿದ್ದರು. ಇದರಿಂದಾಗಿ ಅದೇ ಜನಾಂಗ ಪೂಜೆಗೆ ಅವಕಾಶ ಮಾಡಿಕೊಡುವಂತೆ ಮುಂದೆ ಬಂದಿರುವುದು ಉತ್ತಮ ಬೆಳವಣಿಗೆ. ಅಮ್ಮಕೊಡವರಿಗೆ ನಾವು ಬೆಂಬಲ ನೀಡಲಾಗುವುದು ಎಂದು ತಿಳಿಸಿದ್ದಾರೆ.