ಸೋಮವಾರಪೇಟೆ, ಆ. 25: ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಯಲ್ಲಿ ಕೊಡಗು ಜಿಲ್ಲೆಗೆ ದ್ವಿತೀಯ ಸ್ಥಾನ ಗಳಿಸಿದ ಪಟ್ಟಣ ಸಮೀಪದ ಮಹದೇಶ್ವರ ಬ್ಲಾಕ್ ನಿವಾಸಿ, ಸಾಂದೀಪನಿ ಶಾಲೆಯ ವಿದ್ಯಾರ್ಥಿನಿ ಎಸ್. ಗಾನಾಳನ್ನು ಸೋಮವಾರಪೇಟೆ ಹೋಬಳಿ ಜಾನಪದ ಪರಿಷತ್ ವತಿಯಿಂದ ಸನ್ಮಾನಿಸಲಾಯಿತು.

ಪಟ್ಟಣದ ಪತ್ರಿಕಾಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿ ಗಾನಾಳಿಗೆ ಅಭಿನಂದನಾ ಪತ್ರ ನೀಡಿ ಗೌರವಿಸಲಾಯಿತು.

ಇದೇ ಸಂದರ್ಭ ಆಕೆಯ ಪೋಷಕರಾದ ಸುಜಿತ್ ಮತ್ತು ಸೀಮಾ, ಶಿಕ್ಷಕರಾದ ದೀಪಿಕಾ ಸುದರ್ಶನ್, ವಾಸಂತಿ ಅವರು ಗಳನ್ನು ಅಭಿನಂದಿಸಲಾಯಿತು.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಹೋಬಳಿ ಜಾನಪದ ಪರಿಷತ್ ನಿರ್ದೇಶಕ ಕೆ.ಎ. ಪ್ರಕಾಶ್ ಮಾತನಾಡಿ, ಗ್ರಾಮೀಣ ಭಾಗದ ವಿದ್ಯಾರ್ಥಿನಿಯ ಸಾಧನೆಯನ್ನು ಶ್ಲಾಘಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ಹೋಬಳಿ ಘಟಕದ ಅಧ್ಯಕ್ಷ ಎಸ್.ಎ. ಮುರಳೀಧರ್ ವಹಿಸಿದ್ದರು.

ವೇದಿಕೆಯಲ್ಲಿ ಜೇಸೀ ಸಂಸ್ಥೆಯ ಮಮತ, ತಾ.ಪಂ. ಸದಸ್ಯೆ ತಂಗಮ್ಮ, ಪ.ಪಂ. ಸದಸ್ಯೆ ನಳಿನಿ ಗಣೇಶ್, ಪರಿಷತ್‍ನ ಕಾರ್ಯದರ್ಶಿ ಎಂ.ಎ. ರುಬೀನಾ ಅವರುಗಳು ಉಪಸ್ಥಿತರಿದ್ದರು.