ಕೂಡಿಗೆ, ಆ. 25: ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನೀಡುವ ರಾಷ್ಟ್ರಪತಿ ಪದಕಕ್ಕೆ ಭಾಜನರಾಗಿರುವ ಸೋಮವಾರಪೇಟೆ ತಾಲೂಕಿನ ಡಿವೈಎಸ್‍ಪಿ ಶೈಲೇಂದ್ರ ಅವರನ್ನು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಕುಶಾಲನಗರದ ಕಚೇರಿಯಲ್ಲಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಕಸಾಪ ಅಧ್ಯಕ್ಷ ಲೋಕೇಶ್ ಸಾಗರ್, ಕುಶಾಲನಗರ ತಾಲೂಕು ಕಸಾಪ ಅಧ್ಯಕ್ಷ ರಂಗಸ್ವಾಮಿ, ಪದಾಧಿಕಾರಿಗಳಾದ ಸದಾಶಿವ ಎಸ್. ಪಲ್ಲೇದ್ ಮತ್ತು ನಾಗೇಗೌಡ ಇದ್ದರು.