ಮಡಿಕೇರಿ, ಆ. 25: ಮಳೆಹಾನಿಯಿಂದ ಸಂಕಷ್ಟ ಎದುರಿಸುತ್ತಿರುವ ರೈತರು ಹಾಗೂ ಬೆಳೆಗಾರರಿಂದ ಸೋಮವಾರಪೇಟೆ ತಾ.ಪಂ ಸದಸ್ಯ ಮಣಿಉತ್ತಪ್ಪ ಅವರು ಪರಿಹಾರಕ್ಕಾಗಿ ಅರ್ಜಿ ಸ್ವೀಕರಿಸಿದರು.

ಚೆಟ್ಟಳ್ಳಿ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಆಗಮಿಸಿದ ಸುಮಾರು 80ಕ್ಕೂ ಹೆಚ್ಚು ಗ್ರಾಮಸ್ಥರು ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಅರ್ಜಿ ಸಲ್ಲಿಸಿದರು. ತೋಟಗಾರಿಕಾ ಇಲಾಖೆಯ ಅಧಿಕಾರಿ ಕಾವ್ಯ ಹಾಗೂ ಕೃಷಿ ಅಧಿಕಾರಿ ಅರುಣ ಅವರಿಗೆ ಮಣಿ ಉತ್ತಪ್ಪ ಅವರು ಅರ್ಜಿಗಳನ್ನು ಹಸ್ತಾಂತರಿಸಿದರು. ಈ ಸಂದರ್ಭ ಸಂಘದ ನಿರ್ದೇಶಕ ಧನಂಜಯ್ ಹಾಜರಿದ್ದರು.