ಕಡಂಗ, ಆ. 25: ರಾಷ್ಟ್ರಪತಿ ಪೆÇಲೀಸ್ ಪದಕಕ್ಕೆ ಭಾಜನರಾದ ಮಡಿಕೇರಿ ಗ್ರಾಮಾಂತರ ವೃತ್ತ ನಿರೀಕ್ಷಕ ದಿವಾಕರ್ ಅವರನ್ನು ಕೊಡಗು ಮುಸ್ಲಿಂ ಒಕ್ಕೂಟ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸನ್ಮಾನಿಸಲಾಯಿತು.

ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಒಕ್ಕೂಟದ ಪದಾಧಿಕಾರಿಗಳು ಶಾಲು ಹೊದಿಸಿ, ನೆನಪಿನ ಕಾಣಿಕೆ ನೀಡಿ ಗೌರವಿಸಿದರು.

ಈ ಸಂದರ್ಭ ಒಕ್ಕೂಟದ ಜಿಲ್ಲಾಧ್ಯಕ್ಷ ಶರ್ಫುದ್ಧೀನ್, ಮಡಿಕೇರಿ ತಾಲೂಕು ಅಧ್ಯಕ್ಷ ರಜಾಕ್, ಉಪಾಧ್ಯಕ್ಷ ಜಾಫರ್ ಶರೀಫ್, ಜಿಲ್ಲಾ ಸಂಚಾಲಕ ಅಬ್ದುಲ್ ರೆಹಮಾನ್, ಕಾರ್ಯದರ್ಶಿ ನಿಚ್ಚು ಉಪಸ್ಥಿತರಿದ್ದರು.