ಗೋಣಿಕೊಪ್ಪ ವರದಿ, ಆ. 25: ಉದುರುತ್ತಿರುವ ಕಾಫಿಯಿಂದಾಗಿ ನಷ್ಟದಲ್ಲಿರುವ ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ಘೋಷಿಸುವಂತೆ ವೀರಾಜಪೇಟೆ ತಾಲೂಕು ಬಿಜೆಪಿ ಕೃಷಿಮೋರ್ಚಾ ಅಧ್ಯಕ್ಷ ಕಟ್ಟೇರ ಈಶ್ವರ ತಿಮ್ಮಯ್ಯ, ವಿಧಾನ ಪರಿಷತ್ ಸದಸ್ಯ ಸುನಿಲ್ ಸುಬ್ರಮಣಿ ಅವರನ್ನು ಒತ್ತಾಯಿಸಿದರು. ಪೋಕಳತೋಡಿನಲ್ಲಿ ಕಳೆದ ಬೇಸಿಗೆಯಲ್ಲಿ ನಿರ್ಮಿಸಿದ್ದ ತಡೆಗೋಡೆ ಮತ್ತೆ ಕುಸಿದಿರುವುದನ್ನು ಪರಿಶೀಲಿಸಲು ಆಗಮಿಸಿದ್ದ ಸಂದರ್ಭ ಸಮಸ್ಯೆ ಬಗ್ಗೆ ಗಮನ ಸೆಳೆದರು.

ಈ ಸಂದರ್ಭ ಜಿಲ್ಲಾ ಬಿಜೆಪಿ ಪ್ರ. ಕಾರ್ಯದರ್ಶಿ ಕುಞ್ಞಂಗಡ ಅರುಣ್ ಭೀಮಯ್ಯ, ಉಪಾಧ್ಯಕ್ಷ ಅರುಣ್, ಖಜಾಂಚಿ ಚೆಪ್ಪುಡೀರ ಮಾಚಯ್ಯ, ವೀರಾಜಪೇಟೆ ಮಂಡಲ ಅಧ್ಯಕ್ಷ ನೆಲ್ಲೀರ ಚಲನ್ ಕುಮಾರ್, ಪ್ರ. ಕಾರ್ಯದರ್ಶಿ ಅಜ್ಜಿಕುಟ್ಚೀರ ಪ್ರವೀಣ್, ಹಿಂದುಳಿದ ಮೋರ್ಚಾದ ಅಧ್ಯಕ್ಷ ರಾಜೇಶ್ ಇದ್ದರು.