ವೀರಾಜಪೇಟೆ, ಆ. 27 : ಬಿಟ್ಟಂಗಾಲ ಗ್ರಾಮದ ಕಾಫಿ ತೋಟದ ಬದಿಯಲ್ಲಿ ಇಂದು ಬೆಳಿಗ್ಗೆ ಎರವರ ಮುತ್ತ (38) ಎಂಬವನ ಕೊಳೆತು ನಾರುತ್ತಿದ್ದ ಮೃತದೇಹ ಪತ್ತೆಯಾಗಿದ್ದು ಗ್ರಾಮಾಂತರ ಪೊಲೀಸರು ಮೃತದೇಹವನ್ನು ಇಲ್ಲಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಗುರಿಪಡಿಸಿ ವಾರೀಸುದಾರರಿಗೆ ಒಪ್ಪಿಸಿದ್ದಾರೆ.

ಬಿಟ್ಟಂಗಾಲದ ತಿಮ್ಮಯ್ಯ ಎಂಬವರಿಗೆ ಸೇರಿದ ತೋಟದ ಒಂದು ಬದಿಯಲ್ಲಿ ಬಿದ್ದಿದ್ದ ಮೃತದೇಹವನ್ನು ದಾರಿಹೋಕರು ಪತ್ತೆಹಚ್ಚಿ ಪೊಲೀಸರಿಗೆ ಸುಳಿವು ನೀಡಿದ ನಂತರ ಪೊಲೀಸರು ತನಿಖೆ ನಡೆಸಿದಾಗ ಈತ ಇದೇ ತೋಟದಲ್ಲಿ ಕಾರ್ಮಿಕನಾಗಿ ದುಡಿಯುತ್ತಿದ್ದು ಕಂಠಪೂರ್ತಿ ಮದ್ಯ ಸೇವಿಸುತ್ತಿದ್ದನೆಂದೂ ಗೊತ್ತಾಗಿದ್ದು ಈತನಿಗೆ ಸಹೋದರಿಯರು ಸಹೋದರರು ಇರುವುದಾಗಿ ಹೇಳಲಾಗಿದೆ. ಪೊಲೀಸರು ಪ್ರಕರಣವನ್ನು ದಾಖಲಿಸಿ ಮುಂದಿನ ಕ್ರಮಕೈಗೊಂಡಿದ್ದಾರೆ.