ಮಡಿಕೇರಿ: ಸರಕಾರಿ ಪ್ರಥಮ ದರ್ಜೆ ಕಾಲೇಜು ಮಡಿಕೇರಿ, ರಾಷ್ಟ್ರೀಯ ಸೇವಾ ಯೋಜನಾ ಘಟಕ, ರೆಡ್ ರಿಬ್ಬನ್ ಕ್ಲಬ್ ಮತ್ತು ರೆಡ್ ಕ್ರಾಸ್ ಘಟಕ ಹಾಗೂ ಆಂತರಿಕ ಗುಣಮಟ್ಟ ಭರವಸೆ ಕೋಶÀ ಇವುಗಳ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಆವರಣದಲ್ಲಿ ರಾಷ್ಟ್ರೀಯ ಸದ್ಭ್ಬಾವನಾ ದಿನಾಚರಣೆಯನ್ನು ನಡೆಸಲಾಯಿತು.

ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲೆ ಪ್ರೊ. ಚಿತ್ರಾ ವೈ ವಹಿಸಿದ್ದರು. ಕಾಲೇಜಿನ ಡಾ. ಕೆ.ಸಿ. ದಯಾನಂದ ಪ್ರಮಾಣ ವಚನ ಬೋಧಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಎಲ್ಲಾ ಬೋಧಕ ಮತ್ತು ಬೋಧಕೇತರ ವರ್ಗದವರು ಹಾಜರಿದ್ದರು.ವೀರಾಜಪೇಟೆ: ವೀರಾಜಪೇಟೆಯ ಕಾವೇರಿ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಸದ್ಭಾವನಾ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ವಾಣಿಜ್ಯ ಶಾಸ್ತ್ರ ಪ್ರಾಧ್ಯಾಪಕರಾದ ಡಾ. ಆನಂದ್ ಕಾರ್ಲ ಮಾತೃ ಭಾಷೆಯನ್ನು ಉಳಿಸಿ ಬೆಳೆಸುವ ಪ್ರಯತ್ನ ಮಾಡಬೇಕೆಂದು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲೆ ಡಾ. ಎ.ಎಸ್. ಪೂವಮ್ಮ ವಹಿಸಿಕೊಂಡಿದ್ದರು.

ಕಾರ್ರ್ಯಕ್ರಮದಲ್ಲಿ ಕಾವೇರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎನ್.ಎಂ. ನಾಣಯ್ಯ, ಎನ್‍ಎಸ್‍ಎಸ್ ಘಟಕದ ಸಂಚಾಲಕ ಹೆಚ್.ವಿ. ನಾಗರಾಜು ಮತ್ತು ಸಿ.ಪಿ. ನಿರ್ಮಿತ ಕಚೇರಿ ಅಧೀಕ್ಷಕಿ ಡಿ.ಎಂ. ಲತಾಕುಮಾರಿ ಹಾಜರಿದ್ದರು.