ವೀರಾಜಪೇಟೆ, ಆ. 29: ವೀರಾಜಪೇಟೆ ತಾಲೂಕು ಬಿಲ್ಲವ ಸೇವಾ ಸಮಾಜದಿಂದ ವರ್ಷಂಪ್ರತಿ ಆಚರಿಸಿಕೊಂಡು ಬರುತ್ತಿರುವ ಶ್ರಿ ನಾರಾಯಣಗುರು ಜಯಂತಿಯನ್ನು ಬಿಟ್ಟಂಗಾಲದ ಅಂಬಟ್ಟಿಯಲ್ಲಿ ಸೆಪ್ಟೆಂಬರ್ 2 ರಂದು ಆಚರಿಸಲಾಗುವುದು ಎಂದು ತಾಲೂಕು ಅಧ್ಯಕ್ಷ ಬಿ.ಎಂ. ಗಣೇಶ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿ ಕೋವಿಡ್-19 ಇರುವ ಕಾರಣ ಸರಳವಾಗಿ ಆಚರಿಸಲು ನಿರ್ಧರಿಸಲಾಗಿದೆ. ಇದೇ ಸಂದರ್ಭ ವೀರಾಜಪೇಟೆ ತಾಲೂಕಿನಲ್ಲಿ 2019-20ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಹಾಗೂ ಪಿ.ಯು.ಸಿ.ಯಲ್ಲಿ ಶೇ. 80 ಮೇಲ್ಪಟ್ಟು ಅಂಕ ಪಡೆದ ವಿದ್ಯಾರ್ಥಿಗಳನ್ನು ಪುರಸ್ಕರಿಸ ಲಾಗುವುದು ಎಂದರು.
ಈ ಸಂಬಂಧ ಗಣೇಶ್ ದೂ. 9945526358 ಅವರನ್ನು ಸಂಪರ್ಕಿಸಬಹುದಾಗಿದೆ. ಗೋಷ್ಠಿಯಲ್ಲಿ ಕಾರ್ಯದರ್ಶಿ ಬಿ.ಎಸ್. ಜನಾರ್ಧನ್, ಖಜಾಂಚಿ ಬಿ.ಎಂ. ಸತೀಶ್, ನಿರ್ದೇಶಕ ನಾರಾಯಣ್ ಉಪಸ್ಥಿತರಿದ್ದರು.