ಮುಳ್ಳೂರು : ಆ. 31: ಶನಿವಾರಸಂತೆ, ಗೋಪಾಲಪುರ, ಮುಳ್ಳೂರು, ಮಾಲಂಬಿ, ಆಲೂರು ಸಿದ್ದಾಪುರ, ಬಾಣವಾರ ಮಾರ್ಗ ವಾಗಿ ಕುಶಾಲನಗರ ಕಡೆಗೆ ಕಳೆದ 5 ತಿಂಗಳಿನಿಂದ ಖಾಸಗಿ ಬಸ್ಸುಗಳ ಓಡಾಟ ಸ್ಥಗಿತಗೊಂಡಿದೆ ಈ ಮಾರ್ಗದಲ್ಲಿ ಪ್ರತಿದಿನ 25 ಖಾಸಗಿ ಬಸ್ಸುಗಳು ಸಂಚರಿಸುತ್ತಿದ್ದರಿಂದ ಪ್ರಯಾಣಿಕರಿಗೆ ಯಾವುದೆ ತೊಂದರೆಯಾಗುತ್ತಿರಲಿಲ್ಲ ಹಾಗೂ ಇದೆ ಮಾರ್ಗವಾಗಿ ಹಲವಾರು ವರ್ಷಗಳಿಂದ ಕೇವಲ ಒಂದೆ ಒಂದು ಸರಕಾರಿ ಬಸ್ ಸಂಚರಿಸುತ್ತಿದೆ. ಈ ಕೆಎಸ್‍ಆರ್‍ಟಿಸಿ ಬಸ್ಸು ಸಕಲೇಶಪುರ, ಶನಿವಾರಸಂತೆ, ಆಲೂರುಸಿದ್ದಾಪುರ, ಬಾಣವಾರ, ಕುಶಾಲನಗರ ಮಾರ್ಗವಾಗಿ ಮೈಸೂರಿಗೆ ಬೆಳಗ್ಗೆ 9.30ಕ್ಕೆ ಈ ಮಾರ್ಗವಾಗಿ ಸಂಚರಿಸಿ ಇದೆ ಮಾರ್ಗವಾಗಿ ಸಂಜೆ 4.30ಕ್ಕೆ ಸಕಲೇಶಪುರ ಕಡೆಗೆ ವಾಪಾಸಾಗು ತ್ತದೆ. ಈ ಮಾರ್ಗದಲ್ಲಿ ಕುಶಾಲನಗರ ಕಡೆಗೆ ಹೋಗುವ ಪ್ರಯಾಣಿಕರು ಖಾಸಗಿ ಬಸ್ಸುಗಳ ಓಡಾಟ ಸ್ಥಗಿತಗೊಂಡಿ ರುವ ಹಿನ್ನೆಲೆ ಕಳೆದ 5 ತಿಂಗಳಿನಿಂದ ಇದೆ ಮಾರ್ಗವಾಗಿ ದಿನನಿತ್ಯ ಓಡಾಡುವ ಪ್ರಯಾಣಿಕರು ಖಾಸಗಿ ವಾಹನ, ಬಾಡಿಗೆ ವಾಹನ ಮಾಡಿಕೊಂಡು ಅಧಿಕ ಹಣತೆತ್ತು ಪ್ರಯಾಣಿಸುತ್ತಿದ್ದಾರೆ. ಈ ಹಿನ್ನೆಲೆ ಈ ಮಾರ್ಗವಾಗಿ ಮತ್ತೊಂದು ಕೆಎಸ್‍ಆರ್‍ಟಿ ಬಸ್ಸು ಸಂಚಾರಕ್ಕಾಗಿ ವ್ಯವಸ್ಥೆ ಮಾಡಿಕೊಡಬೇಕೆಂದು ಗ್ರಾಮೀಣ ಭಾಗದ ಪ್ರಯಾಣಿಕರು ಮಡಿಕೇರಿ ವಿಭಾಗದ ವ್ಯವಸ್ಥಾಪಕ ರಿಗೆ ಪತ್ರಿಕಾ ಹೇಳಿಕೆ ಮೂಲಕ ಮನವಿ ಮಾಡಿದ್ದು ಶನಿವಾರಸಂತೆ-ಆಲೂರು ಸಿದ್ದಾಪುರ ಕುಶಾಲನಗರ ಮಾರ್ಗವಾಗಿ ಬೆಳಗ್ಗೆ 11 ಗಂಟೆಗೆ ಹಾಗೂ ಕುಶಾಲನಗರದಿಂದ ಇದೆ ಮಾರ್ಗವಾಗಿ ಮಧ್ಯಾಹ್ನ 1-30 ಗಂಟೆಗೆ ಕೆಎಸ್‍ಆರ್‍ಟಿಸಿ ಬಸ್ಸಿನ ವ್ಯವಸ್ಥೆ ಮಾಡಿಕೊಡುವಂತೆ ಪ್ರಯಾಣಿಕರು ಮಡಿಕೇರಿ ಡಿಪೊ ವ್ಯವಸ್ಥಾಪಕರಿಗೆ ಮನವಿ ಮಾಡಿ ದ್ದಾರೆ. -ಭಾಸ್ಕರ್ ಮುಳ್ಳೂರು