ಗೋಣಿಕೊಪ್ಪ ವರದಿ, ಸೆ. 1: ಬಿಟ್ಟಂಗಾಲ, ಅಂಬಟ್ಟಿ, ಬಾಳುಗೋಡು ಗ್ರಾಮಗಳನ್ನು ಒಳಗೊಂಡ ಭಾರತೀಯ ಜನತಾ ಪಕ್ಷದ ಶಕ್ತಿ ಕೇಂದ್ರಕ್ಕೆ ಪಿ.ಆರ್ ದಾಮೋದರ್ ಹಾಗೂ ಚಂಗೇಟೀರÀ ರಾಜ ಸೋಮಯ್ಯ ಅವರನ್ನು ಆಯ್ಕೆ ಮಾಡಲಾಗಿದೆ.

ಅಲ್ಲಿನ ಬಿಜೆಪಿ ಕಚೇರಿಯಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರುಣ್ ಭೀಮಯ್ಯ, ವೀರಾಜಪೇಟೆ ಮಂಡಲ ಅಧ್ಯಕ್ಷ ನೆಲ್ಲೀರ ಚಲನ್, ಕಾರ್ಯದರ್ಶಿ ಅಮ್ಮಣಿಚಂಡ ರಂಜಿ, ಭವ್ಯ ಇದ್ದರು.