ಮಡಿಕೇರಿ, ಸೆ. 14: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಪೋಷÀಣ ಅಭಿಯಾನ ಯೋಜನೆಯಡಿ ಅಂಗನವಾಡಿ ಸೇವೆಗಳನ್ನು ಡಿಜಿಟಲೀಕರಣ ಗೊಳಿಸುವ ನಿಟ್ಟಿನಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ನಗರದ ಜಿ.ಪಂ. ಭವನದಲ್ಲಿ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಸಾಂಕೇತಿಕವಾಗಿ ಸ್ಮಾರ್ಟ್ ಫೆÇೀನ್ ವಿತರಿಸಿದರು.ಈ ವೇಳೆ ಪೋಷಣ್ ಅಭಿಯಾನ್ ಸಂಬಂಧಿಸಿದಂತೆ ಪೆÇೀಸ್ಟರ್ ಬಿಡುಗಡೆ ಮಾಡಿದರು. ಈ ಸಂದರ್ಭ ಮಾತನಾಡಿದ ಸಚಿವರು ಕೇಂದ್ರ ಸರ್ಕಾರ ರಾಜ್ಯಕ್ಕೆ 129 ಕೋಟಿ ರೂ.ಬಿಡುಗಡೆ ಮಾಡಿದ್ದು, ರಾಜ್ಯದ 66 ಸಾವಿರ ಅಂಗನವಾಡಿ ಕಾರ್ಯಕರ್ತೆಯರಿಗೆ ಈ ಉಚಿತ ಮೊಬೈಲ್ ನೀಡಲಾಗುತ್ತಿದೆ ಎಂದರು. ಅಂತೆಯೇ ಜಿಲ್ಲೆಯ 921 ಅಂಗನವಾಡಿಗಳ ಕಾರ್ಯಕರ್ತೆ ಯರಿಗೆ ಸ್ಯಾಮ್‍ಸಂಗ್ ಕಂಪೆನಿಯ 10 ಸಾವಿರ ರೂ. ಮೌಲ್ಯದ ಮೊಬೈಲ್‍ನ್ನು ಉಚಿತವಾಗಿ ನೀಡಲಾಗುತ್ತಿದೆ. ರಾಜ್ಯದಲ್ಲಿ ಯಾವುದೇ ಮಕ್ಕಳು, ತಾಯಂದಿರು ಅಪೌಷ್ಠಿಕತೆಯಿಂದ ಬಳಲಬಾರದು. ಅಂಗನವಾಡಿಗಳಲ್ಲಿ ನೀಡುವ ಔಷಧೋಪಚಾರ ಸೇರಿದಂತೆ ಮತ್ತಿತರ ವಿಚಾರಗಳ ಬಗ್ಗೆ ಮೊಬೈಲ್ ಮೂಲಕ ಮಾಹಿತಿ ಸಂಗ್ರಹಿಸ ಬಹುದಾಗಿದೆ.

(ಮೊದಲ ಪುಟದಿಂದ)

ಅಲ್ಲದೆ ಅಂಗನವಾಡಿಗಳಲ್ಲಿ ಮಕ್ಕಳಿಗೆ ಚುಚ್ಚುಮದ್ದು, ದಾಖಲಾತಿ ಸಂಖ್ಯೆಗಳ ಬಗ್ಗೆಯೂ ಮೊಬೈಲ್ ಮೂಲಕ ಮಾಹಿತಿ ಪಡೆಯಬಹುದಾಗಿದೆ ಎಂದು ಸಚಿವರು ಹೇಳಿದರು

ಮಾತೃಪೂರ್ಣ, ಮಾತೃ ವಂದನ ಸೇರಿದಂತೆ 40 ಬಗೆಯ ಕಾರ್ಯಕ್ರಮ ಕಡತಗಳನ್ನು ನಿರ್ವಹಣೆ ಮಾಡಬಹುದು ಎಂದು ಅವರು ತಿಳಿಸಿದರು.

ನೆಟ್‍ವರ್ಕ್ ಸಮಸ್ಯೆಗೆ ಸಂಬಂಧಿಸಿದಂತೆ ಶಾಸಕರಾದ ಕೆ.ಜಿ.ಬೋಪಯ್ಯ ಅವರು ಗಮನ ಸೆಳೆದರು. ಈ ಬಗ್ಗೆ ಗಮನ ಹರಿಸಲಾಗುವುದೆಂದು ಸಚಿವರು ಹೇಳಿದರು. ಶಾಸಕರಾದ ಎಂ.ಪಿ. ಅಪ್ಪಚ್ಚು ರಂಜನ್, ವಿಧಾನ ಪರಿಷತ್ ಸದಸ್ಯರಾದ ಸುನಿಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಜಿ.ಪಂ. ಅಧ್ಯಕ್ಷ ಬಿ.ಎ ಹರೀಶ್, ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿ.ಪಂ. ಸಿ.ಇ.ಒ ಭಂವರ್ ಸಿಂಗ್ ಮೀನಾ, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರ, ಡಿಸಿಎಫ್‍ಗಳಾದ ಪ್ರಭಾಕರನ್, ಮಹೇಶ್ ಕುಮಾರ್ ಇತರರು ಇದ್ದರು.