ಕೂಡಿಗೆ, ಸೆ.16: ಹೆಬ್ಬಾಲೆ ಗ್ರಾಮ ಪಂಚಾಯತಿ ವ್ಯಾಪ್ತಿಯ 6ನೇ ಹೊಸಕೋಟೆ ಗ್ರಾಮದ ಸರ್ವೆ ನಂಬರ್ 14ರ ಪೈಸಾರಿ ಕೆರೆ 1.50 ಎಕರೆ ಪ್ರದೇಶವನ್ನು ಕಂದಾಯ ಇಲಾಖೆಯ ವತಿಯಿಂದ ಸರ್ವೆ ನಡೆಸಿ ಒತ್ತುವರಿಯನ್ನು ತೆರವುಗೊಳಿಸಲಾಯಿತು. ಈ ಕೆರೆಯ ಹದ್ದುಬಸ್ತನ್ನು ಹೆಬ್ಬಾಲೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಹಸ್ತಾಂತರಿಸಲಾಯಿತು.

ಈ ಸಂದರ್ಭ ಕುಶಾಲನಗರ ಕಂದಾಯ ಇಲಾಖೆಯ ಕಂದಾಯ ಪರಿವೀಕ್ಷಕ ಮಧುಸೂದನ್, ಹೆಬ್ಬಾಲೆ ಗ್ರಾಮ ಲೆಕ್ಕಾಧಿಕಾರಿ ಸಚಿನ್, ಅಭಿವೃದ್ಧಿ ಅಧಿಕಾರಿ ರಾಕೇಶ್ ಸೇರಿದಂತೆ ಸರ್ವೆ ಇಲಾಖೆಯವರು ಮತ್ತು ಸಿಬ್ಬಂದಿ ವರ್ಗದವರು ಹಾಜರಿದ್ದರು.