ಭಾಗಮಂಡಲ, ಸೆ. 17: ಕಳೆದ ಆರು ತಿಂಗಳಿಂದ ಕೊರೊನಾ ಸೋಂಕಿನಿಂದಾಗಿ ವಿವಿಧ ದೇವಾಲಯಗಳಲ್ಲಿ ಸ್ಥಗಿತಗೊಂಡಿದ್ದ ಪೂಜಾ ಕೈಂಕರ್ಯಗಳು ನಡೆಯುತ್ತಿದ್ದು ಭಕ್ತರು ದೇವಾಲಯಗಳತ್ತ ಹೆಜ್ಜೆ ಹಾಕುತ್ತಿದ್ದಾರೆ.
ಭಾಗಮಂಡಲ ತಲಕಾವೇರಿ ಕ್ಷೇತ್ರಗಳಲ್ಲೂ ಭಕ್ತರ ಪಾಲ್ಗೊಳ್ಳುವಿಕೆ ಹೆಚ್ಚುತ್ತಿದೆ. ವಿಶೇಷವಾಗಿ ಶನಿವಾರ ಮತ್ತು ಭಾನುವಾರಗಳಂದು ಸ್ಥಳೀಯರಲ್ಲದೆ ಪರವೂರಿನ ಭಕ್ತರು ವಿವಿಧ ಪೂಜಾ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತಿದ್ದರು. ದೇವಾಲಯಗಳಿಗೆ ಭಕ್ತರ ಭೇಟಿ ನಿಧಾನವಾಗಿ ಹೆಚ್ಚುತ್ತಿದ್ದು ಮಹಾಲಯ ಅಮಾವಾಸ್ಯೆಯ ದಿನವಾದ ಗುರುವಾರ ದೇವಾಲಯಗಳಲ್ಲಿ ಅಧಿಕ ಸಂಖ್ಯೆಯ ಭಕ್ತರು ಕಂಡುಬಂದರು.
ಭಾಗಮಂಡಲದ ಭಗಂಡೇಶ್ವರ ದೇವಾಲಯದಲ್ಲಿ ಹಾಗೂ ತಲಕಾವೇರಿಯಲ್ಲಿ ಭಕ್ತರು ವಿಶೇಷ ಪೂಜೆ ನೆರವೇರಿಸಿದರು. ತ್ರ್ರಿವೇಣಿ ಸಂಗಮದಲ್ಲಿ ಪಿಂಡ ಪ್ರದಾನ ನೆರವೇರಿಸಿದರು. ಹಲವು ದಿನಗ ಳಿಂದ ಪಿಂಡ ನೆರವೇರಿಸಲಾರದೆ ಭಕ್ತರು ಇಂದು ಅಧಿಕ ಸಂಖ್ಯೆಯಲ್ಲಿ ಪಿಂಡಪ್ರದಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. -ಸುನಿಲ್