ಸೋಮವಾರಪೇಟೆ, ಸೆ. 23: ಸಮೀಪದ ತೊರೆನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರಸಿನಕುಪ್ಪೆ ಗ್ರಾಮದಲ್ಲಿರುವ ಶ್ರೀ ಮಂಜುನಾಥ ಮತ್ತು ನವನಾಗ ಸನ್ನಿಧಿಯಲ್ಲಿ ಪಂಚಮಿ ಪೂಜೆ ಶ್ರದ್ಧಾಭಕ್ತಿಯಿಂದ ನೆರವೇರಿತು.

ಕ್ಷೇತ್ರದ ಪ್ರಧಾನ ಗುರುಗಳಾದ ಶ್ರೀ ರಾಜೇಶ್‍ನಾಥ್‍ಜೀ ಅವರ ಮಾರ್ಗದರ್ಶನದಲ್ಲಿ ಶ್ರೀ ಮಂಜುನಾಥ ಕ್ಷೇತ್ರದಲ್ಲಿ ಬೆಳಗ್ಗಿನಿಂದ ಗಣಪತಿ ಹೋಮ, ರುದ್ರಾಭಿಷೇಕ ಸೇರಿದಂತೆ ವಿವಿಧ ಅಭಿಷೇಕ, ಅಲಂಕಾರ ಪೂಜೆ, ಮಹಾಮಂಗಳಾರತಿ ನೆರವೇರಿತು.

ನಂತರ ನವನಾಗ ಸನ್ನಿಧಿಯಲ್ಲಿ ವಿವಿಧ ಅಭಿಷೇಕ, ಪಂಚಮಿ ಪೂಜೆ, ವಿಶೇಷ ಅಲಂಕಾರ ಪೂಜೆ, ಮಹಾಮಂಗಳಾರತಿ ನಂತರ ಭಕ್ತಾದಿಗಳಿಗೆ ಅನ್ನಸಂತರ್ಪಣೆ ನಡೆಯಿತು. ಅರ್ಚಕ ಜಗದೀಶ್ ಉಡುಪ, ಮಯೂರ ಅವರುಗಳ ಪೌರೋಹಿತ್ವದಲ್ಲಿ ಪೂಜಾ ಕೈಂಕರ್ಯಗಳು ನಡೆದವು. ದೇವಾಲಯ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ನಾಪಂಡ ಮುತ್ತಪ್ಪ, ಕಾರ್ಯದರ್ಶಿ ಪ್ರಕಾಶ್, ದೇವಾಲಯ ಸಮಿತಿ ಅಧ್ಯಕ್ಷ ಮೋಹನ್ ಸೇರಿದಂತೆ ಇತರರು ಉಪಸ್ಥಿತರಿದ್ದರು.