ಮಡಿಕೇರಿ, ಸೆ. 24: ಮಕ್ಕಂದೂರು ಗ್ರಾ.ಪಂ. ವ್ಯಾಪ್ತಿಯ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ 2019-20ನೇ ಸಾಲಿನ ಅನುಮೋದಿತ ಕ್ರಿಯಾಯೋಜನೆಯ ಕಾಮಗಾರಿಗಳ ಸಾಮಾಜಿಕ ಲೆಕ್ಕ ಪರಿಶೋಧನೆ ಕಾರ್ಯಕ್ರಮ ಹಾಗೂ ಜಮಾಬಂದಿ ನೋಡೆಲ್ ಅಧಿಕಾರಿ ಮೋಹನ್ ಅವರ ಅಧ್ಯಕ್ಷತೆಯಲ್ಲಿ ಪಂಚಾಯಿತಿ ಆಡಳಿತಾಧಿಕಾರಿ ಗಾಯಿತ್ರಿ ಟಿ.ಎನ್. ಅವರ ಉಪಸ್ಥಿತಿಯಲ್ಲಿ ಗ್ರಾ.ಪಂ. ಕಚೇರಿ ಸಭಾಂಗಣದಲ್ಲಿ ತಾ. 29 ರಂದು ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ.