ಮಡಿಕೇರಿ, ಸೆ. 25: ಕರ್ನಾಟಕ ಜಾನಪದ ಅಕಾಡೆಮಿಯು 2019ರ ಜನವರಿ 1 ರಿಂದ 2019ರ ಡಿಸೆಂಬರ್ 31 ರವರೆಗೆ ಪ್ರಥಮ ಆವೃತ್ತಿಯಲ್ಲಿ ಮುದ್ರಣಗೊಂಡಿರುವ ಕನಿಷ್ಟ 150 ಪುಟಗಳ ಮಿತಿಯಲ್ಲಿರುವ ಜನಪದ ಗದ್ಯ, ಜನಪದ ಪದ್ಯ, ಜನಪದ ವಿಚಾರ-ವಿಮರ್ಶೆ- ಸಂಶೋಧನೆ, ಜನಪದ ಸಂಕೀರ್ಣ, ಈ ನಾಲ್ಕು ಪ್ರಾಕಾರಗಳ ಅತ್ಯುತ್ತಮ ಜಾನಪದ ಕೃತಿಗಳಿಗೆ ಬಹುಮಾನ ನೀಡುವ ಯೋಜನೆಯಡಿ ಜಾನಪದ ಕೃತಿಗಳನ್ನು ಪುಸ್ತಕ ಬಹುಮಾನಕ್ಕೆ ಆಹ್ವಾನಿಸಲಾಗಿದೆ.
ಲೇಖಕರು, ಪ್ರಕಾಶಕರು, ಸಂಪಾದಕರು 4 ಕೃತಿಗಳನ್ನು ದ್ವಿಪ್ರತಿ ಬಿಲ್ಲಿನೊಂದಿಗೆ ರಿಜಿಸ್ಟ್ರಾರ್, ಕರ್ನಾಟಕ ಜಾನಪದ ಅಕಾಡೆಮಿ, 2ನೇ ಮಹಡಿ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560002 ಇವರಿಗೆ ಅಕ್ಟೋಬರ್, 25 ರೊಳಗೆ ಖುದ್ದಾಗಿ, ಕೊರಿಯರ್ ಅಥವಾ ಅಂಚೆ ಮೂಲಕ ಕಳುಹಿಸಿ ಕೊಡುವಂತೆ ಕರ್ನಾಟಕ ಜಾನಪದ ಅಕಾಡೆಮಿಯ ರಿಜಿಸ್ಟ್ರಾರ್ ಎನ್.ನಮ್ರತ ಅವರು ತಿಳಿಸಿದ್ದಾರೆ.