ಕುಶಾಲನಗರ, ಸೆ 28: ಕುಶಾಲನಗರ ನೂತನ ತಾಲೂಕು ಘೋಷಣೆ ಆಗಿರುವ ಬೆನ್ನಲ್ಲೇ ತಾಲೂಕು ಕಾರ್ಯಚಟುವಟಿಕೆಗಳಿಗೆ ಅನುಕೂಲವಾಗು ವಂತೆ ರೂ. 50 ಲಕ್ಷ ಅನುದಾನ ಬಿಡುಗಡೆ ಮಾಡಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆದೇಶ ಮಾಡಿದ್ದಾರೆ.

ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅವರು ಮುಖ್ಯಮಂತ್ರಿಗಳಿಗೆ ರೂ. 1 ಕೋಟಿ ಅನುದಾನ ಬಿಡುಗಡೆ ಮಾಡಲು ಮನವಿ ಮಾಡಿದ ಮೇರೆಗೆ ಮುಖ್ಯಮಂತ್ರಿಗಳು ತಕ್ಷಣ ರೂ. 50 ಲಕ್ಷ ಬಿಡುಗಡೆ ಮಾಡಲು ಆದೇಶಿಸಿದ್ದಾರೆ. ತಾಲೂಕು ಕಾರ್ಯಚಟುವಟಿಕೆ ಆರಂಭಿಸಲು ಕಚೇರಿ ಪೀಠೋಪಕರಣಗಳಿಗೆ ಈ ಹಣ ಬಳಸಲಾಗುವುದು ಎಂದು ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ತಿಳಿಸಿದ್ದಾರೆ.