ಕುಶಾಲನಗರ, ಸೆ. 29: ಬೈಲುಕೊಪ್ಪೆ ಠಾಣಾ ವ್ಯಾಪ್ತಿಯ ಮಂಚದೇವನಹಳ್ಳಿ ಗ್ರಾಮದ ಬಸ್ ನಿಲ್ದಾಣದಲ್ಲಿ ಅಪರಿಚಿತ ಗಂಡಸಿನ ಮೃತದೇಹ ಪತ್ತೆಯಾಗಿದೆ. ಅಂದಾಜು 40 ರಿಂದ 45 ವರ್ಷ ಪ್ರಾಯದ ವ್ಯಕ್ತಿಯ ಯಾರಾದರೂ ವಾರಸುದಾರರು ಇದ್ದಲ್ಲಿ ಬೈಲುಕೊಪ್ಪ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ಕೋರಿದ್ದಾರೆ.