ಅಮ್ಮತ್ತಿ, ಅ. 1: ವೀರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಅಮ್ಮತ್ತಿ ಕಾರ್ಮಾಡುವಿನ ಬಸ್ ತಂಗುದಾಣದಲ್ಲಿ ಅಪರಿಚಿತ ವ್ಯಕ್ತಿಯೋರ್ವರÀ ಶವ ಪತ್ತೆಯಾಗಿದೆ. ಅಂದಾಜು 55-60 ವರ್ಷ ಪ್ರಾಯದ ವ್ಯಕ್ತಿಯ ಮೃತದೇಹ ಇದಾಗಿದ್ದು, ಕಳೆದೆರಡು ದಿನಗಳಿಂದ ತಂಗುದಾಣದಲ್ಲಿ ಮದ್ಯಪಾನ ಮಾಡುತ್ತ ಕುಳಿತಿದ್ದು, ಇಂದು ಬೆಳಿಗ್ಗೆ ಸುಮಾರು ಹತ್ತು ಗಂಟೆಗೆ ಸಾವನ್ನಪ್ಪಿರುವುದಾಗಿ ಹೇಳಲಾಗಿದೆ. ಸ್ಥಳಕ್ಕೆ ವೀರಾಜಪೇಟೆ ಗ್ರಾಮಾಂತರ ಠಾಣಾಧಿಕಾರಿ ವೀಣಾ ನಾಯಕ್ ಭೇಟಿ ನೀಡಿ ಮುಂದಿನ ಕ್ರಮ ಜರುಗಿಸಿದ್ದಾರೆ. ವೀರಾಜಪೇಟೆ ತಾಲೂಕು ಆಸ್ಪತ್ರೆಯಲ್ಲಿ ಶವ ಇರಿಸಲಾಗಿದೆ. ಈ ಬಗ್ಗೆ ಮಾಹಿತಿ ಇದ್ದಲ್ಲಿ ಗ್ರಾಮಾಂತರ ಠಾಣೆ 08274-258462 ಅಥವಾ ಪೊಲೀಸ್ ಕಂಟ್ರೋಲ್ ರೂಂ. 229000 ಅನ್ನು ಸಂಪರ್ಕಿಸಲು ಪೊಲೀಸ್ ಪ್ರಕಟಣೆ ಕೋರಿದೆ.