ಮಡಿಕೇರಿ, ಅ. 1: ವಸತಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಅವರು ತಾ. 3 ರಂದು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

ಅಂದು ಬೆಳಗ್ಗೆ 11 ಗಂಟೆಗೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ದಸರಾ ಆಚರಣೆ ಪೂರ್ವ ಸಿದ್ಧತಾ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಬಳಿಕ ಮಧ್ಯಾಹ್ನ 12 ಗಂಟೆಗೆ ತಲಕಾವೇರಿಯಲ್ಲಿ ನಡೆಯುವ ತೀರ್ಥೋದ್ಭವ ಕುರಿತಂತೆ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 1 ಗಂಟೆಗೆ ಸ್ವಚ್ಛ ಭಾರತ್ ಅಭಿಯಾನದಡಿ ಖರೀದಿಸಲಾದ ಕಸ ವಿಲೇವಾರಿ ವಾಹನಗಳ ಲೋಕಾರ್ಪಣೆ ಕಾರ್ಯಕ್ರಮ. ಬಳಿಕ ಮಧ್ಯಾಹ್ನ 3 ಗಂಟೆಗೆ ಕೊಳಕೇರಿ ಗ್ರಾಮದ ಮೂಟೇರಿ ಶ್ರೀ ಭಗವತಿ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ.