ಮಡಿಕೇರಿ ಅ. 9: ಬಿಪಿಎಲ್ ಕಾರ್ಡ್‍ದಾರರಿಗೆ ಅಕ್ಕಿ, ಅರ್ಹ ಫಲಾನುಭವಿಗಳಿಗೆ ಮಾಸಾಶನ, ವಿಧವಾ ವೇತನ ಮತ್ತಿತರ ಸೌಲಭ್ಯಗಳನ್ನು ನೀಡದೆ ರಾಜ್ಯ ಸರ್ಕಾರ ವಂಚಿಸುತ್ತಿದೆ ಎಂದು ಆರೋಪಿಸಿರುವ ಜಾತ್ಯತೀತ ಜನತಾದಳದ ಯುವ ಘಟಕ, ಸರ್ಕಾರದ ವೈಫಲ್ಯ ಖಂಡಿಸಿ ತಾ. 12 ರಂದು ಸೋಮವಾರಪೇಟೆ ಮತ್ತು ತಾ. 16 ರಂದು ಮಡಿಕೇರಿಯ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸುವುದಾಗಿ ತಿಳಿಸಿದೆ.

ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ಯುವ ಘಟಕದ ಮಹಾ ಪ್ರಧಾನ ಕಾರ್ಯದರ್ಶಿ ಕೆ.ಜಿ. ಜಾಶೀರ್ ಈ ಬಗ್ಗೆ ವಿವರಿಸಿದರು.

ಗೋಷ್ಠಿಯಲ್ಲಿ ವಕ್ತಾರ ರವಿಕಿರಣ್ ರೈ, ಯುವ ಘಟಕದ ತಾಲೂಕು ಅಧ್ಯಕ್ಷ ಅಭಿತ್ ಅಪ್ಪಯ್ಯ, ನಗರಾಧ್ಯಕ್ಷ ಕೆ.ಎಂ. ಮೋನಿಶ್ ಹಾಗೂ ಯುವ ವಕ್ತಾರ ಎಂ.ಯು.ಜಿನಾಶ್ ಉಪಸ್ಥಿತರಿದ್ದರು.