ಶ್ರೀಮಂಗಲ, ಅ. 10: ನಂ. 33ನೇ ಮಾಜಿ ಸೈನಿಕರ ಸಂಘ ಟಿ.ಶೆಟ್ಟಿಗೇರಿ ಇದರ ವಾರ್ಷಿಕ ಮಹಾಸಭೆಯು ತಾ. 12 ರಂದು (ನಾಳೆ) ಪೂರ್ವಾಹ್ನ 10 ಗಂಟೆಗೆ ಸಂಘದ ಸಭಾಂಗಣದಲ್ಲಿ ಸಂಘದ ಅಧ್ಯಕ್ಷ ಕಟ್ಟೇರ ವಿಶ್ವನಾಥ್ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಈ ಸಂದÀರ್ಭ ಬೈಲಾ ತಿದ್ದುಪಡಿ, ಎಸ್. ಎಸ್. ಎಲ್.ಸಿ, ಪಿ.ಯು.ಸಿ. ಹಾಗೂ ಪದವಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ಸಂಘದ ಸದಸ್ಯರ ಮಕ್ಕಳಿಗೆ ಪ್ರೋತ್ಸಾಹಕರ ಬಹುಮಾನ, ಪ್ರಶಸ್ತಿ ನೀಡಲಾಗುವುದು ಎಂದು ಸಂಘದ ಕಾರ್ಯದರ್ಶಿ ಉಳುವಂಗಡ ಗಣಪತಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.