ಮಡಿಕೇರಿ, ಅ. 13: ತಾಯಿಗಿಂತ ಬಂಧುವಿಲ್ಲ, ಉಪ್ಪಿಗಿಂತ ರುಚಿಯಿಲ್ಲ ಎಂಬ ಗಾದೆ ಮಾತಿನಂತೆ ಹೆಣ್ಣು ದೈವ ಸ್ವರೂಪಿಯಾಗಿದ್ದಾಳೆ ಎಂದು ಅಭಿಪ್ರಾಯಿಸಿದ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ ಚಿ.ನಾ. ಸೋಮೇಶ್ ಕೊಡವ ಸಂಸ್ಕøತಿಯನ್ನು ಉಳಿಸಿ ಬೆಳೆಸುವ ಕೆಲಸವಾಗಬೇಕೆಂದರು.

ನಗರದ ಭಾರತೀಯ ವಿದ್ಯಾಭವನ ಸಭಾಂಗಣದಲ್ಲಿ ಮಂಗಳವಾರ ಕರ್ನಾಟಕ ಕೊಡವ ಸಾಹಿತ್ಯ ಅಕಾಡಮಿ ವತಿಯಿಂದ ನಡೆದ ಪೊಮ್ಮಕ್ಕಡ ಕೊಡವ ಸಾಂಸ್ಕøತಿಕ ಕಾರ್ಯಕ್ರಮ ಮತ್ತು ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಸಮಾಜದ ಅಭಿವೃದ್ಧಿಯಲ್ಲಿ ಹೆಣ್ಣು ಮಕ್ಕಳ ಪಾತ್ರ ಎಂಬ ವಿಷಯದ ಬಗ್ಗೆ ವಿಚಾರ ಮಂಡನೆ ಮಾಡಿ ಅವರು ಮಾತನಾಡಿದರು. ಕೊಡವ ಹೆಣ್ಣು ಮಕ್ಕಳ ಉಡುಗೆ ತೊಡುಗೆಗಳು ವಿಶ್ವ ವ್ಯಾಪಿಯಾಗಿದ್ದು, ವಿಶೇಷ ಸ್ಥಾನಪಡೆದಿದೆ.

ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ, ಜನರಲ್ ತಿಮ್ಮಯ್ಯ ಅವರಿಂದ ಕೊಡಗು ಪ್ರಪಂಚದ್ಯಾಂತ ಹೆಸರುವಾಸಿಯಾಗಿದ್ದು, ಭಾರತೀಯ ಸೈನ್ಯಕ್ಕೆ ಕೊಡವರ ಕೊಡುಗೆ ಅಪಾರವಾದದ್ದು ಎಂದು ತಿಳಿಸಿದರು. ಕೊಡವ ಸಂಸ್ಕøತಿಯನ್ನು ಉಳಿಸಿ ಬೆಳೆಸಬೇಕೆಂದರು.

ಅಖಿಲ ಕೊಡವ ಸಮಾಜ ಪೊಮ್ಮಕ್ಕಡ ಪರಿಷತ್ ಅಧ್ಯಕ್ಷರಾದ ಬಾಚರಣಿಯಂಡ ರಾಣು ಅಪ್ಪಣ್ಣ ಮಾತನಾಡಿ ಭಾರತ ದೇಶದಲ್ಲಿ ಹೆಣ್ಣು ಮಕ್ಕಳಿಗೆ ಹೆಚ್ಚಿನ ಗೌರವ ಸ್ಥಾನ ಮಾನಗಳಿವೆ. ಅದನ್ನು, ಉಳಿಸಿ, ಬೆಳೆಸಿಕೊಂಡು ಹೋಗಬೇಕು ಎಂದರು.

ಕೊಡವ ಸಮಾಜ ಪೆÇಮ್ಮಕ್ಕಡ ಕೂಟದ ಅಧ್ಯಕ್ಷರಾದ ಕನ್ನಂಡ ಕವಿತಾ ಬೊಳ್ಳಪ್ಪ ಅವರು ಕೊಡವ ಸಂಸ್ಕøತಿಯನ್ನು ಉಳಿಸಿ ಬೆಳೆಸುವಲ್ಲಿ ಹೆಣ್ಣು ಮಕ್ಕಳ ಪಾತ್ರ ಎಂಬ ವಿಷಯದ ಕುರಿತು ವಿಚಾರ ಮಂಡನೆ ಮಾಡಿ ಮಕ್ಕಳಿಗೆ ಸಂಸ್ಕøತಿ ಮತ್ತು ಸಂಸ್ಕಾರದ ಬಗ್ಗೆ ತಿಳಿಸಬೇಕು. ಹಬ್ಬಗಳ ಮಹತ್ವ ಮತ್ತು ಶಾಸ್ತ್ರ ಸಾಂಪ್ರದಾಯದ ಬಗ್ಗೆ ಹೆಣ್ಣು ಮಕ್ಕಳಿಗೆ ತಿಳಿಸಬೇಕು ಎಂದರು.

ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷೆ ಡಾ. ಅಮ್ಮಾಟಂಡ ಪಾರ್ವತಿ ಅಪ್ಪಯ್ಯ ಮಾತನಾಡಿ ಹೆಣ್ಣು ಮಕ್ಕಳಿಗೆ ಪುರುಷರಷ್ಟು ಸಮಾನ ಹಕ್ಕು ಎಂಬವುದು ಕೊಡವ ಪದ್ಧತಿಯಲ್ಲಿದೆ. ಅದು ನಮ್ಮ ಹೆಮ್ಮೆ ಎಂದು ತಿಳಿಸಿದರು.

ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ರಿಜಿಸ್ಟ್ರಾರ್ ಅಜ್ಜಿಕುಟ್ಟಿರ ಸಿ. ಗಿರೀಶ್ ನಿರೂಪಿಸಿ, ವಂದಿಸಿದರು. ಸಂಚಾಲಕರಾದ ಬಾಚಮಂಡ ಗೌರಮ್ಮ ಮಾದಮ್ಮಯ್ಯ ಸ್ವಾಗತಿಸಿದರು. ಅಕಾಡೆಮಿಯ ಸದಸ್ಯರು ಇತರರು ಇದ್ದರು.