ಗೋಣಿಕೊಪ್ಪ ವರದಿ, ಅ. 13: ಪಾದಚಾರಿಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಕೂಲಿ ಕಾರ್ಮಿಕ ಸಾವಿಗೀಡಾಗಿದ್ದಾರೆ. ಬಿಹಾರ್ ಸಮಸ್ತಿಪುರ್ ಮೂಲದ ಗೋಣಿಕೊಪ್ಪ ಕಾವೇರಿ ಹಿಲ್ಸ್ ಬಡಾವಣೆಯಲ್ಲಿ ವಾಸವಿದ್ದ ಪ್ರಮೋದ್ ದಾಸ್ (34) ಮೃತ ದುರ್ಧೈವಿ.

ಮಂಗಳವಾರ ಮಧ್ಯಾಹ್ನ 2 ಗಂಟೆ ವೇಳೆಗೆ ಗೋಣಿಕೊಪ್ಪ-ಪೆÇನ್ನಂಪೇಟೆ ಮುಖ್ಯರಸ್ತೆಯ ಜೋಡುಬೀಟಿ ಎಂಬಲ್ಲಿ ಘಟನೆ ನಡೆದಿದೆ. ಸಹ ಕಾರ್ಮಿಕರೊಂದಿಗೆ ಕಟ್ಟಡ ನಿರ್ಮಾಣ ಕೆಲಸ ಮಾಡುತ್ತಿದ್ದ ಪ್ರಮೋದ್ ದಾಸ್ ಮೂತ್ರ ವಿಸರ್ಜನೆಗೆಂದು ರಸ್ತೆ ಬದಿಯತ್ತ ಬಂದಿದ್ದಾಗ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ. ಜೋರಾಗಿ ಕೂಗಿಕೊಂಡ ಶಬ್ಧಕ್ಕೆ ಕೆಲಸ ಮಾಡುತ್ತಿದ್ದವರು ಬಂದು ನೋಡಿದಾಗ ಪ್ರಮೋದ್ ದಾಸ್ ಗಂಭೀರ ಗಾಯಗೊಂಡು ಬಿದ್ದಿದ್ದರು.ತಲೆ, ಎದೆ, ಕೈಗೆ ಗಾಯವಾಗಿತ್ತು.

ಗೋಣಿಕೊಪ್ಪ ಸಮುದಾಯ ಆರೋಗ್ಯ ಕೇಂದ್ರಕ್ಕೆ ರವಾನಿಸಲಾಯಿತಾದರೂ ಆಸ್ಪತ್ರೆಯಲ್ಲಿ ಸಾವಿಗೀಡಾದರು. ಆರೋಪಿ ಮೇಲೆ ಕ್ರಮಕೈಗೊಳ್ಳಬೇಕು ಎಂದು ಕಟ್ಟಡ ಗುತ್ತಿಗೆದಾರ ಸುಂದರ್ ಪೆÇನ್ನಂಪೇಟೆ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ತನಿಖೆ ಮುಂದುವರಿದಿದೆ.