ಮಡಿಕೇರಿ, ಅ. 19: ಮುಂಬರುವ ಗ್ರಾ.ಪಂ. ಚುನಾವಣೆಗೆ ಸಂಬಂಧಿಸಿದಂತೆ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಪ್ರು ರವೀಂದ್ರ ಅವರ ಅಧ್ಯಕ್ಷತೆಯಲ್ಲಿ ಸಿದ್ಧತಾ ಸಭೆ ನಡೆಯಿತು.
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ವಿಧಾನ ಪರಿಷತ್ ಸದಸ್ಯರಾದ ವೀಣಾ ಅಚ್ಚಯ್ಯ, ಗ್ರಾ.ಪಂ. ಚುನಾವಣೆಯಲ್ಲಿ ಹೆಚ್ಚಿನ ಸಾಧನೆ ಮಾಡುವ ಮೂಲಕ ಜಿಲ್ಲೆಯಲ್ಲಿ ಕಾಂಗ್ರೆಸ್ ಶಾಸಕರ ಆಯ್ಕೆಗೆ ಮುನ್ನುಡಿ ಬರೆಯಲು ಕರೆ ನೀಡಿದರು.
2018ರ ವಿಧಾನ ಸಭಾ ಅಭ್ಯರ್ಥಿ ಕೆ.ಪಿ. ಚಂದ್ರಕಲಾ ಅವರಿಂದ ಕಾಂಗ್ರೆಸ್ ಪಕ್ಷಕ್ಕೆ ಪೂರಕವಾದ ವಾತಾವರಣ ಇದ್ದು ಇದರ ಸದುಪಯೋಗ ಪಡೆಯಲು ಕಾರ್ಯಕರ್ತರಿಗೆ ಸಲಹೆ ನೀಡಿದರು. ಪ್ರಸ್ತಾವಿಕವಾಗಿ ಮಾತನಾಡಿದ ಜಿಲ್ಲಾಧ್ಯಕ್ಷ ಕೆ.ಕೆ. ಮಂಜುನಾಥ್ ಕುಮಾರ್, ಎಲ್ಲಾ ನಾಯಕರುಗಳು ಪ್ರತಿ ವಲಯಗಳಲ್ಲಿ ಕಾರ್ಯಕರ್ತರ ಜೊತೆಗೂಡಿ ಸಹಕಾರ ನೀಡಲಿದ್ದಾರೆ ಎಂದರು.ಪ್ರತಿ ಜಿ.ಪಂ. ಕ್ಷೇತ್ರದಲ್ಲಿ ಚುನಾವಣಾ ಸಮಿತಿ ರಚಿಸಿ ಅಖಾಡಕ್ಕೆ ಇಳಿಯುವುದಾಗಿ ಮಾಹಿತಿ ನೀಡಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಅಪ್ರು ರವೀಂದ್ರ, ಬೂತ್ ಮಟ್ಟದ ಸಮಿತಿ ರಚನೆಯಲ್ಲಿ ಸ್ಥಳೀಯ ಮುಖಂಡರನ್ನು ಸಮನ್ವಯದೊಂದಿಗೆ ಸಿದ್ಧಪಡಿಸಲು ಮನವಿ ಮಾಡಿದರು. ಕೆಪಿಸಿಸಿ ಕಾರ್ಯದರ್ಶಿ ವೆಂಕಪ್ಪ ಗೌಡರು ಪಕ್ಷದ ಚುನಾವಣಾ ಕಾರ್ಯಸೂಚಿಯ ಬಗ್ಗೆ ಮಾಹಿತಿ ನೀಡಿದರು.
ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟಣೆಯ ಜಿಲ್ಲಾಧ್ಯಕ್ಷ ತೆನ್ನೀರಾ ಮೈನಾ, ಮುಖಂಡರು ಗಳಾದ ಮನುಮೇದಪ್ಪ, ಸುಜು ತಿಮ್ಮಯ್ಯ, ಡಾ. ಜಯಂತಿ ಶೆಟ್ಟಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುರಯ್ಯಾ ಅಬ್ರಾರ್, ಡಿಸಿಸಿ ಸದಸ್ಯ ಪುಷ್ಪ ಪೂಣಚ್ಚ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ವಲಯ ಕಾಂಗ್ರೆಸ್ ಅಧ್ಯಕ್ಷರುಗಳಾದ ದಾದು ಬೋಪಯ್ಯ, ಮಂದ್ರಿರ ಮೋಹನ್ ದಾಸ್, ಜಾನ್ಸನ್ ಪಿಂಟೋ, ಕೆದಕಲ್ ವೆಂಕಪ್ಪ, ಕೊಟ್ಟಕೇರಿಯನ ಪ್ರದೀಪ್, ಮಹಿಳಾ ಬ್ಲಾಕ್ ಅಧ್ಯಕ್ಷೆ ಮೀನಾಕ್ಷಿ ಕೇಶವ, ಪ್ರಮುಖರಾದ ತೀರ್ಥ ಕುಮಾರ್, ಹೊಸ್ಕೇರಿ ಜಯಣ್ಣ, ನಾಸೀರ್ ಸೀದಿ ಯವರು ಮಾತನಾಡಿ ಅಭಿಪ್ರಾಯ ವ್ಯಕ್ತಪಡಿಸಿದರು.