ಮಡಿಕೇರಿ, ಅ.23 : ಪ್ರಸಕ್ತ(2020-21) ಸಾಲಿನ ದಸರಾ ಮಹೋತ್ಸವದ ಅಂಗವಾಗಿ ಮೀನುಗಾರಿಕೆ ಇಲಾಖೆ ವತಿಯಿಂದ ದೇವರ ಮೀನು ಎಂದು ಪ್ರಸಿದ್ದಿ ಇರುವ, ಅಳಿವಿನಂಚಿನ ಮಹಶೀರ್ ತಳಿಯ ಹಾರಂಗಿ ಮೀನುಮರಿ ಉತ್ಪಾದನಾ ಹಾಗೂ ಪಾಲನಾ ಕೇಂದ್ರದಲ್ಲಿ 2020-21ನೇ ಸಾಲಿನಲ್ಲಿ ಉತ್ಪಾದಿಸಿದ 2000 ಬಲಿತ ಬಿತ್ತನೆ ಮರಿಗಳನ್ನು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಕೊಡಗು ಜಿಲ್ಲೆ ದಸರಾ ಸಮಿತಿ ಕಾರ್ಯಾಧ್ಯಕ್ಷ ರಾಬಿನ್ ದೇವಯ್ಯ, ಮೀನುಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಕೆ.ಟಿ. ದರ್ಶನ್ ಹಾಗೂ ಮೀನುಗಾರಿಕೆ ಇಲಾಖೆಯ ಅಧಿಕಾರಿ ಸ್ನೇಹ ದರ್ಶನ್ ಸಿ., ಮೀನುಗಾರಿಕೆ ಸಹಾಯಕ ನಿರ್ದೇಶಕ ಎಸ್.ಎಂ.ಸಚಿನ್, ಹಾಗೂ ಇಲಾಖೆ ಸಿಬ್ಬಂದಿಗಳ ಸಮ್ಮುಖದಲ್ಲಿ 1895ರಲ್ಲಿ ನಿರ್ಮಾಣಗೊಂಡಿರುವ ಮಡಿಕೇರಿಯ ಪಂಪಿನ ಕೆರೆಯಲ್ಲಿ ದಾಸ್ತಾನು ಮಾಡಲಾಯಿತು.