*ಗೋಣಿಕೊಪ್ಪಲು, ಅ. 26: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖಾ ವತಿಯಿಂದ ತಿತಿಮತಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪೆÇೀಷಣಾ ಅಭಿಯಾನದ ಅಂಗವಾಗಿ ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಇಲಾಖಾ ವತಿಯಿಂದ ನೀಡಲಾಗುವ ಸ್ಮಾರ್ಟ್ ಫೆÇೀನ್ ಅನ್ನು ಅರ್ಹ ಫಲಾನುಭವಿಗಳಿಗೆ ವಿತರಿಸಲಾಯಿತು. ಸಭೆಯಲ್ಲಿ ವೀರಾಜಪೇಟೆ ತಾಲೂಕು ಪಂಚಾಯಿತಿ ಸದಸ್ಯೆ ಆಶಾ ಜೇಮ್ಸ್, ವೈದ್ಯಾಧಿಕಾರಿ ಡಾ. ಹೊಸಮನಿ, ತಿತಿಮತಿ ಪಿ.ಡಿ.ಒ. ಮಮತಾ, ಬಿ.ಹೆಚ್.ಇ.ಓ. ಶಿವಯ್ಯ, ತಾಲೂಕು ಪೆÇೀಷಣಾ ಅಭಿಯಾನದ ಸಂಯೋಜಕ ಕೀರ್ತನ್, ವಿನ್ಸಿ ಸೇರಿದಂತೆ ಅಂಗನವಾಡಿ ಕಾರ್ಯಕರ್ತೆಯರು, ಗರ್ಭಿಣಿಯರು ಮತ್ತು ಆಸ್ಪತ್ರೆ ಸಿಬ್ಬಂದಿಗಳು ಉಪಸ್ಥಿತರಿದ್ದರು.